ಮಾಜಿ ಪ್ರಧಾನ ಮಂತ್ರಿಗಳು ಹಾಗೂ ಅನ್ನದಾತರ ಉಸಿರಾದ ಹೆಚ್.ಡಿ.ದೇವೇಗೌಡರ 90 ನೇ ವರ್ಷದ ಹುಟ್ಟು ಹಬ್ಬವನ್ನು ಪುರಸಭೆ ಸದಸ್ಯ ಕೆ.ಎಸ್.ಸಂತೋಷ್ ಕುಮಾರ್ ನೇತೃತ್ವದಲ್ಲಿ ಕನ್ನಡಿಗರ ಮಾತೃಭೂಮಿ ವೃದ್ಧಾಶ್ರಮದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೆ.ಆರ್.ಪೇಟೆ ತಾಲ್ಲೂಕಿನ ಹೇಮಗಿರಿ ರಸ್ತೆಯಲ್ಲಿರುವ ಮಾತೃಭೂಮಿ ವೃದ್ಧಾಶ್ರಮದಲ್ಲಿ ನಿರ್ಗತಿಕರು, ವಯೋವೃದ್ಧರು, ಮಹಿಳೆಯರು ಹಾಗೂ ಅನಾಥರಿಗೆ ಬಟ್ಟೆ ಮತ್ತು ಉಟ ಬಡಿಸುವ ಮೂಲಕ ವಿಶೇಷವಾಗಿ ಹುಟ್ಟುದಿನವನ್ನು ಆಚರಿಸಿದರು.
ಪಟ್ಟಣದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಚೌಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವೇಗೌಡರು ಶತಾಯುಷಿಗಳಾಗಿ, ಆರೋಗ್ಯವಂತ ಜೀವನ ನಡೆಸುವ ಶಕ್ತಿಯನ್ನು ದೇವಿಯು ನೀಡಲಿ ಎಂದು ಸಂತೋಷ್ ಕುಮಾರ್ ಪೂಜೆ ಸಲ್ಲಿಸಿದರು.
ಜೆಡಿಎಸ್ ಮುಖಂಡ ಹಾಗೂ ಟಿಎಪಿಎಂಎಸ್ ಅಧ್ಯಕ್ಷರಾದ ಬಿ.ಎಲ್.ದೇವರಾಜು, ರಾಜ್ಯ ಜೆಡಿಎಸ್ ಮುಖಂಡ ಬಸ್ ಕೃಷ್ಣೇಗೌಡ, ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕ ಎ.ಆರ್.ರಘು, ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಎಲ್.ಸುರೇಶ್, ಎಪಿಎಂಸಿ ಮಾಜಿ ನಿರ್ದೇಶಕ ಶಶಿಧರ್ ಸಂಗಾಪುರ, ನೋಟರಿಯವರಾದ ಎಚ್.ಆರ್.ಕೃಷ್ಣಕುಮಾರ್ ಮುಖಂಡ ಎ.ಎಂ.ಸಂಜೀವಪ್ಪ ಸೇರಿದಂತೆ ನೂರಾರು ಮುಖಂಡರಿದ್ದರು.
ರೈತನಾಯಕ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟು ಹಬ್ಬವನ್ನು ಅತ್ಯಂತ ಸರಳವಾಗಿ ವೃದ್ಧಾಶ್ರಮದಲ್ಲಿ ಅನಾಥರು ಹಾಗೂ ನಿರ್ಗತಿಕ ಮಹಿಳೆಯರೊಂದಿಗೆ ಆಚರಿಸಿದ್ದು ತಾಲೂಕಿನ ಜನತೆಯ ಮೆಚ್ಚುಗೆಗೆ ಪಾತ್ರವಾಯಿತು.
ಇದನ್ನು ಓದಿ: ಹೆಚ್.ಡಿ.ದೇವೇಗೌಡರ ಜನ್ಮದಿನ ಆಚರಣೆ