ಮಂಡ್ಯನಗರ ವ್ಯಾಪ್ತಿಗೆ ಸೇರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಬಡಾವಣೆಯ ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದೇನೆ ಎಂದು ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ತಿಳಿಸಿದರು.
ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಬಡಾವಣೆಯಲ್ಲಿ ಕಾಂಕ್ರಿಟ್ ರಸ್ತೆ, ಕುಡಿಯುವ ನೀರಿನ ವಾಟರ್ ಟ್ಯಾಂಕ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಬಡಾವಣೆ ಇಂಡುವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು, ಮಂಡ್ಯ ನಗರ ಪ್ರದೇಶದ ವ್ಯಾಪ್ತಿಗೆ ಹೊಂದಿಕೊಂಡಿರುವ ಬಡಾವಣೆಯಾಗಿದೆ. ನಾನು ಈ ಹಿಂದೆ ಶಾಸಕನಾಗಿದ್ದಾಗ ಇಲ್ಲಿಯ ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದರು.
ಈ ಬಡಾವಣೆಯಲ್ಲಿ ಯುಜಿಡಿ, ರಸ್ತೆ, ಚರಂಡಿಯನ್ನು ಹಂತ-ಹಂತವಾಗಿ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಿದ್ದೇನೆ.ಕುಡಿಯುವ ನೀರಿಗಾಗಿ ವಾಟರ್ ಟ್ಯಾಂಕ್, ಬೋರ್ ವೆಲ್, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಂಡವಾಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಭಿಲಾಷ, ಉಪಾಧ್ಯಕ್ಷ ಸತ್ಯ, ಗ್ರಾಮ ಪಂಚಾಯಿತಿ ಸದಸ್ಯೆ ಮಮತಾ, ನಾಲ್ವಡಿ ಕೃಷ್ಣರಾಜ ಒಡೆಯರ್ ಬಡಾವಣೆಯ ಅಧ್ಯಕ್ಷ ರಘು ನಿವಾಸಿಗಳಾದ ನಾಗೇಶ್, ಚಿಕ್ಕಯ್ಯ,ನರಸೇಗೌಡ, ಹನುಮಂತಯ್ಯ, ರತ್ನ, ಶಿವಣ್ಣ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಯೋಗೇಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.