Friday, September 20, 2024

ಪ್ರಾಯೋಗಿಕ ಆವೃತ್ತಿ

ಬೆಳಗಾವಿ| ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ

ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಘಟನೆ ನಡೆದಿದೆ ಸಂತ್ರಸ್ತ ಮಹಿಳೆಯ ಮಗ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿಯ ಕುಟುಂಬಸ್ಥರು ಅವರ ಪ್ರೀತಿಯನ್ನು ಒಪ್ಪದ ಕಾರಣ, ಇಬ್ಬರೂ ಊರು ಬಿಟ್ಟು ಹೋಗಿದ್ದರು. ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದು ವಿಕೃತಿ ಮೆರೆದಿದ್ದಾರೆ ಎಂದು ತಿಳಿದುಬಂದಿದೆ.

ಯುವತಿ ಪ್ರಿಯಾಂಕಾ ಕುಟುಂಬಸ್ಥರು ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿ, ‘ಯಾದಿ ಮೇಲೆ ಶಾದಿ’ ಮಾಡಲು ಮುಂದಾಗಿದ್ದರು. ಹೀಗಾಗಿ, ಪ್ರಿಯಾಂಕಾ ತಾನು ಪ್ರೀತಿಸುತ್ತಿದ್ದ ಯುವಕ ದುಂಡಪ್ಪ ಜೊತೆ ಭಾನುವಾರ ಮಧ್ಯರಾತ್ರಿ ಊರು ಬಿಟ್ಟು ಹೋಗಿದ್ದರು. ಇದನ್ನು ತಿಳಿದ ಆಕೆಯ ಕುಟುಂಬಸ್ಥರು, ಯುವಕನ ಮನೆಗೆ ನುಗ್ಗಿ, ಮನೆಯಲ್ಲಿ ಮಲಗಿದ್ದ ಯುವಕನ ತಾಯಿ ಕಮಲವ್ವ ಅವರನ್ನು ಎಳೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಘಟನೆ ಸಂಬಂಧ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಅವರಲ್ಲಿ, ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

“ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ” ಎಂದು ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಸಿದ್ದರಾಮಪ್ಪ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!