ಮಳವಳ್ಳಿ ತಾಲೂಕಿನ ಕಿರುಗಾವಲು ಸಮೀಪ ದೇಶವಳ್ಳಿ ಗ್ರಾಮದದಲ್ಲಿ ಕೌಟುಂಬಿಕ ಕಲಹದಿಂದಾಗಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಗ್ರಾಮದ ಮಧುಶ್ರೀ (32) ಎಂಬುವರನ್ನು ಆಕೆಯ ಪಯಿ ಮಹದೇವ ಕಬ್ಬಿಣದ ರಾಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ, ಘಟನೆಯ ನಂತರ ಕಿರುಗಾವಲು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.