ಮಂಡ್ಯ ನಗರದ ಕನಕ ಭವನದಲ್ಲಿ ಜಿಲ್ಲಾ ಕುರುಬರ ಸಂಘದ 2022-2023 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ನಂತರ ಮಾತನಾಡಿದ ಅವರು ಅಭಿವೃದ್ಧಿ ಹಾಗೂ ಸಂಘಟನೆ ವಿಚಾರದಲ್ಲಿ ಜಿಲ್ಲಾ ಕುರುಬರ ಸಂಘ ಸದಾ ಕಾರ್ಯೋನ್ಮುಖರಾಗಿ ಜಿಲ್ಲೆಯ ಏಳು ತಾಲೂಕುಗಳ ಅಭಿವೃದ್ಧಿ ವಿಚಾರದಲ್ಲಿ ಸಭೆಗಳನ್ನು ನಡೆಸಿ ಮಾಹಿತಿ ಸಂಗ್ರಹಿಸಿಕೊಂಡಿದ್ದೇವೆ ಎಂದು ಹೇಳಿದರು.
ಮಂಡ್ಯ ಜಿಲ್ಲಾ ಕುರುಬರ ಸಂಘಕ್ಕೆ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿವೇಕಾನಂದ ನಗರದಲ್ಲಿ ನಿವೇಶನ ದೊರಕಿದ್ದು ಅದನ್ನು ಅಭಿವೃದ್ಧಿಪಡಿಸಲು ಎಲ್ಲರೂ ಶಕ್ತಿ ಕೊಡಬೇಕು ಹಾಗೂ ಮುಂದಿನ ದಿನಗಳಲ್ಲಿ ಜಿಲ್ಲಾ ಕುರುಬರ ಸಂಘದ ಅಭಿವೃದ್ಧಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದರು.
ಶೈಕ್ಷಣಿಕ,ಆರ್ಥಿಕ,ರಾಜಕೀಯವಾಗಿ ಸಮುದಾಯ ಸದೃಢವಾಗಲು ಸಂಘಟನೆಯಿಂದ ಮಾತ್ರ ಸಾಧ್ಯ ಆದ್ದರಿಂದ ಜಿಲ್ಲಾ ಕುರುಬರ ಸಂಘ ರಾಜ್ಯದಲ್ಲಿ ಮಾದರಿಯಾಗಿ ಅಭಿವೃದ್ಧಿಹೊಂದಲು ಎಲ್ಲರು ಸಹಕರಿಸಿ ಎಂದು ಹೇಳಿದರು.
2022-23 ನೇ ಸಾಲಿನ ಆಡಿಟ್ ವರದಿಯನ್ನು ಸಭೆಯಲ್ಲಿ ಪರಿಶೀಲಿಸಿ ಎಲ್ಲರ ಒಪ್ಪಿಗೆ ಸೂಚಿಸಲಾಯಿತು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ್,ಉಪಾಧ್ಯಕ್ಷರಾದ ಶ್ರೀನಿವಾಸ್, ರೇವಣ್ಣ, ಖಜಾಂಚಿ ಸಾತನೂರು ರಾಜು,ಆಂತರಿಕ ಲೆಕ್ಕಪರಿಶೋಧಕ ಎಂ.ಮಹೇಶ್, ಸಹ ಕಾರ್ಯದರ್ಶಿ ಗೌರಮ್ಮ, ಸಂಘಟನಾ ಕಾರ್ಯದರ್ಶಿ ಮಹೇಶ್ ಪೂಜಾರಿ,ಸೇರಿದಂತೆ ಸಂಘದ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.