ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಿರಗಂದೂರು ಇಂಡುವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ಕೆಂಪೇಗೌಡ ಬಡಾವಣೆ, ನಾಲ್ವಡಿ ಹಾಗೂ ನಂದಿನಿ ಬಡಾವಣೆಗೆ ಅಗತ್ಯವಾದ ಸೌಲಭ್ಯ ಕಲ್ಪಿಸಲು ಇಂಡುವಾಳು ಗ್ರಾಮ ಪಂಚಾಯಿತಿ ಸಿದ್ಧವಿದೆ ಎಂದು ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ 59 ಲಕ್ಷ ರೂ.ವೆಚ್ಚದಲ್ಲಿ ಕೆಂಪೇಗೌಡ ಬಡಾವಣೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ನಲ್ಲಿ ಸಂಪರ್ಕ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಬಡಾವಣೆಗೆ ಇಲ್ಲಿನ ನಿವಾಸಿಗಳು ಕೋರಿರುವ ಅಗತ್ಯವಾದ ಸೌಲಭ್ಯಗಳನ್ನು ಹಂತ ಹಂತವಾಗಿ ಶೀಘ್ರವಾಗಿ ಈಡೇರಿಸಲಾಗುವುದು. ಕೆಂಪೇಗೌಡ ಬಡಾವಣೆಯಲ್ಲಿ ಟ್ಯಾಂಕ್ ಹಾಗೂ ಕುಡಿಯುವ ನೀರಿನ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರತಿ ಮನೆಮನೆಗೂ ಕಾವೇರಿ ನೀರನ್ನು ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಮಂಜುನಾಥ್, ನಾಡಪ್ರಭು ಕೆಂಪೇಗೌಡ ಬಡಾವಣೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಿ.ಎಲ್.ಶಿವಕುಮಾರ್, ಕಾರ್ಯದರ್ಶಿ ಶಂಕರೇಗೌಡ, ತಿಮ್ಮೇಗೌಡ, ಹನುಮೇಗೌಡ, ಮುರಳಿ, ಜಿ.ಎನ್, ಕೋಟೆ, ಶಿವರಾಮ್, ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಣ್ಣ, ಚಿಕ್ಕಣ್ಣ, ಇಂಡುವಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯೋಗೇಶ್ ಸೇರಿದಂತೆ ಇತರರು ಹಾಜರಿದ್ದರು.