Friday, September 20, 2024

ಪ್ರಾಯೋಗಿಕ ಆವೃತ್ತಿ

ರಾಜಕೀಯದಿಂದ ದೂರ ಉಳಿಯುವರೇ ಮಧು ಜಿ.ಮಾದೇಗೌಡ…?

ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿರುವಂತೆಯೇ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಚುನಾವಣೆಯಲ್ಲಿ ತಟಸ್ಥ ನೀತಿ ಅನುಸರಿಸುವುದಾಗಿ ಹೇಳಿಕೆ ನೀಡಿರುವುದು ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ. ಆದರೆ ಈ ಚುನಾವಣೆಯಲ್ಲಿ ತಟಸ್ಥವಾಗಿರಬೇಕೆಂದು ತೀರ್ಮಾನ ಮಾಡಿದ್ದೇನೆ ಎಂದು ಅವರು ಮಂಡ್ಯದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

ನಾನು ತಟಸ್ಥವಾಗಿರಲು ಸಾಕಷ್ಟು ಬೇರೆ ಬೇರೆ ವಿಚಾರಗಳಿವೆ. ಅದನ್ನು ಸೂಕ್ತ ಸಂದರ್ಭದಲ್ಲಿ ಮಾತನಾಡುತ್ತೇನೆ. ನಮ್ಮಲ್ಲಿ ಸ್ವಲ್ಪ ಗೊಂದಲಗಳಿದ್ದು ಅವುಗಳು ನಿವಾರಣೆಯಾಗಬೇಕು. ಬೇರೆಯವರು ಪಕ್ಷಕ್ಕೆ ಬರುವ ಬಗ್ಗೆ ನನಗೆ ಗೊತ್ತಿಲ್ಲ. ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಆದರೆ ಈ ಚುನಾವಣೆಯಲ್ಲಿ ತಟಸ್ಥವಾಗಿರಬೇಕೆಂದು ನನ್ನ ತೀರ್ಮಾನಗಾಗಿದೆ, ಅದಕ್ಕೆ ಕಾರಣವನ್ನು ಮುಂದಿನ ದಿನದಲ್ಲಿ ಹೇಳುತ್ತೇನೆಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಧು ಜಿ.ಮಾದೇಗೌಡ ಯಾವ ನಿರ್ಧಾರ ಕೈಗೊಳ್ಳುತ್ತಾರೆಂದು ಕಾದು ನೋಡಬೇಕಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!