ವರದಿ: ಪ್ರಭು ವಿ ಎಸ್
ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ಗಳನ್ನು ವಶಪಡಿಸಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿ ಹಾಗೂ ಬೋರಾಪುರ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಜರುಗಿದೆ.
ತಹಶಿಲ್ದಾರ್ ಕೆ ಎಸ್ ಸೋಮಶೇಖರ್ ನೇತೃತ್ವದಲ್ಲ ಕಾರ್ಯಾಚರಣೆ ಕೈಗೊಂಡು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳೆರಡನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ತಹಸಿಲ್ದಾರ್ ಸೋಮಶೇಖರ್ ಬೋರಾಪುರ ಹಾಗೂ ಕೆ ಕೋಡಿಹಳ್ಳಿ ಗ್ರಾಮದ ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆದಿದ್ದು, ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ಮಂಡ್ಯ ಜಿಲ್ಲಾ ಮತ್ತು ಮದ್ದೂರು ತಾಲೂಕು ಆಡಳಿತ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಇದರ ಜೊತೆಗೆ ಈಗಾಗಲೇ ನದಿ ಪಾತ್ರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಕೆಲ ಪ್ರಭಾವಿ ವ್ಯಕ್ತಿಗಳು ಅಧಿಕ ಬೆಲೆಗೆ ಅಕ್ರಮ ಮರಳನ್ನು ಸಾಗಿಸುತ್ತಿದ್ದು, ಈ ಸಂಬಂಧ ಅಕ್ರಮ ಮರಳು ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ತಾಲ್ಲೂ ಕಾರ್ಯ ಪ್ರವೃತ್ತರಾಗಿದ್ದು ದಂಧೆಯಲ್ಲಿ ತೊಡಗಿರುವವರಿಗೆ ಎಚ್ಚರಿಕೆ ನೀಡಿದೆ.