Friday, September 20, 2024

ಪ್ರಾಯೋಗಿಕ ಆವೃತ್ತಿ

ಲೋಕಸಭಾ ಚುನಾವಣೆ| ಬಿಜೆಪಿ ಅಭ್ಯರ್ಥಿಯಾಗಿ ನಂಜುಂಡೇಗೌಡ ಘೋಷಣೆಗೆ ಆಗ್ರಹ

ಮಂಡ್ಯ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಅವರನ್ನು ಘೋಷಿಸುವಂತೆ ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.

ಶ್ರೀರಂಗಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ನಿರ್ಧಾರ ಕೈಗೊಂಡ ಬೆಂಬಲಿಗರು, ಸುಮಾರು 42 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬರುತ್ತಿರುವ ಹೋರಾಟಗಾರ ನಂಜುಂಡೇಗೌಡರಿಗೆ ಈ ಬಾರಿ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.

ಸಭೆಯ ನಂತರ ಮಾತನಾಡಿದ ಕೆ.ಎಸ್.ನಂಜುಂಡೇಗೌಡ, ಶ್ರೀರಂಗಪಟ್ಟಣದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಲಂಚವಿಲ್ಲದೇ ಯಾವುದೇ ಕೆಲಸ ನಡೆಯುತ್ತಿಲ್ಲ, ಭಷ್ಟ್ರ ಅಧಿಕಾರಿಗಳನ್ನು ಶಾಸಕರು ಸರಿ ದಾರಿಗೆ ತರಬೇಕು, ಇಲ್ಲವಾದರೂ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!