Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಗ್ಯಾರಂಟಿ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ; ಸ್ಥಳ ಪರಿಶೀಲನೆ

ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ ಫೆ. 18 ರಂದು ಆಯೋಜಿಸಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ಸ್ಥಳವನ್ನು ಶಾಸಕ ಪಿಎಂ. ನರೇಂದ್ರಸ್ವಾಮಿ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.

ಮಂಡ್ಯ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ನಡೆಯಲಿರುವ ಸರ್ಕಾರದ ಮಹತ್ತರ ಗ್ಯಾರಂಟಿ ಯೋಜನಾ ಪಲಾನುಭವಿಗಳ ಸಮಾವೇಶಕ್ಕೆ ಸುಮಾರು 50 ಸಾವಿರಕ್ಕೂ ಹೆಚ್ಚು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಾಗೂ ಕಾಂಗ್ರೇಸ್ ಕಾಯ೯ಕತ೯ರು ಆಗಮಿಸುವ ಸಾಧ್ಯತೆ ಇರುವುದರಿಂದ ವೇದಿಕೆ, ಕಾಯ೯ಕತ೯ರಿಗೆ ಕುಳಿತುಕೊಳ್ಳುವ ಆಸನ, ಉಟದ ವ್ಯವಸ್ಥೆ, ಕುಡಿಯುವ ನೀರು, ಕಾಯ೯ಕ್ರಮಕ್ಕೆ ಬರುವ ವಾಹನಗಳಿಗೆ ಸ್ಥಳ ನಿಗಧಿ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಅಧಿಕಾರಿಗಳ ಜೊತೆ ಚಚೆ೯ ನಡೆಸಿದರು.

ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ ಸಕಾ೯ರಿ ಕಾಯ೯ಕ್ರಮ ಆಗಿರುವುದರಿಂದ ಜಿಲ್ಲೆ ಮತ್ತು ತಾಲ್ಲೂಕು ಅಧಿಕಾರಿಗಳು ಸಮಾವೇಶ ಯಶಸ್ವಿಗೆ ಸಹಕರಿಸಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಿರುವ ಜವಾಬ್ಧಾರಿಯನ್ನು ಸಮಪ೯ಕವಾಗಿ ನಿವ೯ಹಿಸಬೇಕೆಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ತಹಶಿಲ್ದಾರ್ ಲೊಕೇಶ್, ಡಿವೈಎಸ್ ಪಿ ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಟಿಎಪಿಸಿಎಂಎಸ್ ಅಧ್ಯಕ್ಷ ಬಸವರಾಜು ಸೇರಿದಂತೆ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!