ಮಂಡ್ಯ ಜಿಲ್ಲೆಗೆ ರಾಜ್ಯ ಬಜೆಟ್ ನಲ್ಲಿ ಹೊಸ ಕಾರ್ಖಾನೆಯನ್ನು ಘೋಷಣೆ ಮಾಡಿದ್ದು, ಅದರ ಹಣದ ಮೂಲವನ್ನು ಬಹಿರಂಗಪಡಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಅವರಿಗೆ ಮನವಿ ಸಲ್ಲಿಸಿದರು.
ಮಂಡ್ಯ ಸಕ್ಕರೆ ಕಾರ್ಖಾನೆಗೆಬೆಂಗಳೂರಿನಲ್ಲಿ 1 ಎಕರೆ 37 ಗುಂಟೆ ಜಾಗವಿದೆ. ಇದನ್ನು ಪರಭಾರೆ ಮಾಡುವ ಅನುಮಾನ ಕಾಡುತ್ತಿದೆ . ಸರ್ಕಾರ ಹೊಸ ಸಕ್ಕರೆ ಕಾರ್ಖಾನೆಗೆ ಹಣ ಹಾಕುವ ಬದಲು ಹೀಗಿರುವ ಕಾರ್ಖಾನೆಗೆ ಆಧುನಿಕ ಸ್ಪರ್ಶ ನೀಡಿದರೆ ಜನರ ತೆರಿಗೆ ಹಣ ಉಳಿಯುತ್ತದೆ ಎಂದು ಬಿಜೆಪಿ ತಿಳಿಸಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಂಡ್ಯ ಶಾಸಕರು, ಸಾತನೂರು ಫಾರಂ ಬಳಿ ಹೊಸ ಕಾರ್ಖಾನೆ ಮಾಡುತ್ತೇವೆ ಎನ್ನುತ್ತಾರೆ, ಇನ್ನ್ನೊಂದೆಡೆ ಹಾಲಿ ಈಗಿರುವ ಕಾರ್ಖಾನೆ ಪಕ್ಕದಲ್ಲೇ ಹೊಸ ಕಾರ್ಖಾನೆ ಮಾಡುತ್ತೇವೆ ಎನ್ನುತ್ತಾರೆ ಈ ಬಗ್ಗೆ ಸರಿಯಾದ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಹನಿಯಂಬಾಡಿ ನಾಗರಾಜು, ಮಂಜುನಾಥ್ ಮತ್ತಿತರರಿದ್ದರು.