ಪಾಂಡವಪುರದಲ್ಲಿ ಮೇ.29ರಂದು ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಅಂಬರೀಶ್ ಅವರ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸುವುದಾಗಿ ಅಂಬರೀಶ್ ಅಭಿಮಾನಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಹರಳಹಳ್ಳಿ ಅಂಬಿ ಸುಬ್ಬಣ್ಣ ತಿಳಿಸಿದರು.
ಅಂಬರೀಶ್ ಅಭಿಮಾನಿಗಳ ಸಮ್ಮುಖದಲ್ಲಿ ಪಟ್ಟಣದ ಐದು ದೀಪ ವೃತ್ತದಲ್ಲಿ ಅಂಬಿ ಬೃಹತ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜನರಿಗೆ ಸಿಹಿ ವಿತರಿಸಲಾಗುವುದು.
ಅಂಬಿ ಕ್ಯಾಂಟೀನ್ ಗೋಡೆಗಳ ಮೇಲೆ ಪ್ರದರ್ಶಿಸಿರುವ ಅಂಬರೀಶ್ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ವಿವಿಧ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರವಿಕುಮಾರ್,ಡಾ.ಶಿಲ್ಪ ರವರನ್ನು ಅಭಿನಂದಿಸುವುದಾಗಿ ಅಂಬಿ ಸುಬ್ಬಣ್ಣ ತಿಳಿಸಿದ್ದಾರೆ.