ಮಂಡ್ಯದ ಪ್ರತಿಷ್ಠಿತ ಪಿ.ಇ.ಎಸ್. ಕಾಲೇಜು ಆಫ್ ಇಂಜಿನಿಯರಿಂಗ್ನ ಸಿವಿಲ್ ಎಂಜಿನಿಯರಿಂಗ್ ವಿಭಾಗ ವತಿಯಿಂದ ವಿಶ್ವ ಜಲ ದಿನಾಚರಣೆಯ ಅಂಗವಾಗಿ ‘ಶಾಂತಿಗಾಗಿ ಜಲ’ ಎಂಬ ವಿಷಯದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಲಸಂರಕ್ಷಣೆಯ ಮಹತ್ವ, ಜಾಗತಿಕ ಸಾಮರಸ್ಯ ಮತ್ತು ಪರಿಸರ ಸುಸ್ಥಿರತೆಯನ್ನು ಉತ್ತೇಜಿಸುವ ಪ್ರಮುಖ ಗುರಿಯನ್ನು ಹೊಂದಿತ್ತು. ಪಿ.ಇ.ಟಿ. ಟ್ರಸ್ಟ್ ಕಾರ್ಯದರ್ಶಿ ಎಸ್.ಎಲ್. ಶಿವಾಪ್ರಸಾದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನೀರಿನ ಮೌಲ್ಯ ಮತ್ತು ಅದರ ಸಂರಕ್ಷಣೆಯ ತುರ್ತಿನ ಬಗ್ಗೆ ಜಾಗೃತಿ ಮೂಡಿಸಿತು. ಡಾ.ಎಚ್.ಡಿ. ಚೌಡೆಗೌಡ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ತಮ್ಮ ಭಾಷಣದಲ್ಲಿ ಜಾಗತಿಕ ಸಾಮರಸ್ಯ ಮತ್ತು ಪರಿಸರ ಸುಸ್ಥಿರತೆಯನ್ನು ಸಾಧಿಸುವಲ್ಲಿ ನೀರಿನ ಸಂರಕ್ಷಣೆಯ ನಿರ್ಣಾಯಕ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.
ಪ್ರಸ್ತುತ ಮತ್ತು ಮುಂದಿನ ಪೀಳಿಗೆಯ ನೀರಿನ ಸಂಪನ್ಮೂಲಗಳ ಸಂರಕ್ಷಣೆಯಲ್ಲಿ ಜವಾಬ್ದಾರಿಯುತ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಾಟಕವನ್ನು ಪ್ರದರ್ಶಿಸಿಸುವ ಮೂಲಕ ಅಮೂಲ್ಯ ಸಂಪತ್ತಾದ ನೀರನ್ನು ಉಳಿಸುವ ತುರ್ತು ಅಗತ್ಯತೆಯ ಬಗ್ಗೆ ಸಂದೇಶವನ್ನು ಸಾರಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ಹೆಚ್.ಎಂ.ನಂಜುಡಸ್ವಾಮಿ, ಉಪ ಪ್ರಾಂಶುಪಾಲ ಡಾ.ವಿನಯ್ ಎಸ್, ಮತ್ತು ಡಾ. ಎಚ್.ಡಿ.ಚೌಡೆಗೌಡ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದವರು.