Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಿಎಂ ಕುರಿತು ಸುಳ್ಳುಸುದ್ದಿ ಪ್ರಸಾರ| ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಆರ್.‌ಕನ್ನಡ ಸಂಪಾದಕ ನಿರಂಜನ್ ಅವರ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೆಪಿಸಿಸಿಯ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ರವೀಂದ್ರ ಎಂ ಡಿ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾರ್ಚ್ 27ರಂದು ಸಂಜೆ ಸಂಜೆ 7:15 ಗಂಟೆಗೆ ಆರ್ ಕನ್ನಡ ಸುದ್ದಿ ವಾಹಿನಿಯಲ್ಲಿ ಎಂಜಿ ರಸ್ತೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಚರಿಸುವಾಗ ವಾಹನಗಳ ಸಂಚಾರ ತಡೆದು ಆ್ಯಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಾಡಿದ ವಿಡಿಯೋ ತುಣುಕನ್ನು ಪ್ರಸಾರ ಮಾಡಲಾಗಿದೆ.

ಆದರೆ ನಿಜವಾಗಿ ಸಿಎಂ ಸಿದ್ಧರಾಮಯ್ಯ ಅವರು ಈ ಸಂದರ್ಭದಲ್ಲಿ ಮೈಸೂರಿನಲ್ಲಿದ್ದು, ಬೆಂಗಳೂರಿನ ಕಡೆಗೆ ಪ್ರಯಾಣ ಮಾಡಿಲ್ಲ. ಈ ವಿಡಿಯೋವನ್ನು ಪರಿಶೀಲನೆ ನಡೆಸದೇ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವ ನಿಟ್ಟಿನಲ್ಲಿಯೇ ತಪ್ಪು ಮಾಹಿತಿ ಪ್ರಸಾರ ಮಾಡಲಾಗಿದೆ ಎಂದು  ದೂರು ನೀಡಿದೆ.

ಈ ದೂರಿನ ಆಧಾರದಲ್ಲಿ ತಪ್ಪು ಮಾಹಿತಿ ಪ್ರಸಾರ ಮಾಡಿರುವ ಆರ್ ಕನ್ನಡ (ರಿಪಬ್ಲಿಕ್) ವಾಹಿನಿಯ ಮಾಲೀಕ ಅರ್ನಬ್ ಗೋ ಸ್ವಾಮಿ ಮತ್ತು ಸಂಪಾದಕ ನಿರಂಜನ್ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!