ಮಳವಳ್ಳಿ ತಾಲೂಕಿನ ನಿಡಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಲೋಕೇಶ್ ಗೌಡ, ಉಪಾಧ್ಯಕ್ಷರಾಗಿ ಎಸ್ ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆಯಷ್ಟೇ ಸದರಿ ಸಂಘದ ನಿರ್ಧೇಶಕರ ಆಯ್ಕೆಆಗಿದ್ದು ಇಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗಾಗಿ ನಿಗದಿಯಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಗೌಡಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಸ್ವಾಮಿ ಇಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ ಎಂದು ಚುನಾವಣಾಧಿಕಾರಿ ಆಶಾ ಘೋಷಿಸಿದರು.
ನಂತರ ಅಧ್ಯಕ್ಷ ಲೋಕೇಶ್ ಗೌಡ ಮಾತನಾಡಿ ಸಂಘದ ನಿರ್ದೇಶಕರು ಮತ್ತು ಸಾರ್ವಜನಿಕರನ್ನು ಜೊತೆಗೂಡಿಸಿಕೊಂಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಉತ್ತಮ ರೀತಿಯ ಆದಾಯ ಗಳಿಸುವಲ್ಲಿ ತೆಗೆದುಕೊಂಡು ಹೋಗುತ್ತೇನೆ ಎಂದರು.
ಇದೇ ವೇಳೆಯಲ್ಲಿ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ನಿರ್ದೇಶಕರಿಗೆ ಗ್ರಾಮಾಂತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರಾಜು ಮತ್ತು ಸುಷ್ಮಾ ಅವರು ಅಭಿನಂದಿಸಿದರು.
ನಿರ್ದೇಶಕರಾದ ದೇವರಾಜು ರಾಜು, ಸತೀಶ್, ನಾಗಣ್ಣ, ಮಾದೇ ಗೌಡ, ಮಂಜುನಾಥ್, ನಾಗರಾಜು, ಪುಟ್ಟಮ್ಮ, ಕಾಂತಮ್ಮ,ಆನಂದ ಮುಖಂಡರಾದ ನಂಜುಂಡೇಗೌಡ, ಶಾಂತರಾಜು, ಪುಟ್ಟಸ್ವಾಮಿ, ಸುರೇಶ್ರಾ, ರಾಜೇಶ್ ಮತ್ತಿತರರಿದ್ದರು.