Thursday, September 19, 2024

ಪ್ರಾಯೋಗಿಕ ಆವೃತ್ತಿ

ಲೋಕಸಭೆ ಚುನಾವಣೆ| ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೇಲಿವೆ ಬರೋಬರಿ ಕ್ರಿಮಿನಲ್ 242 ಪ್ರಕರಣಗಳು!

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇರಳದ ವಯನಾಡಿನಲ್ಲಿ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕಣಕ್ಕೆ ಇಳಿದಿದ್ದಾರೆ. ಆದರೆ ಈ ಬಿಜೆಪಿ ಅಭ್ಯರ್ಥಿಯ ಮೇಲೆ ಒಂದಲ್ಲ ಎರಡಲ್ಲ ಸುಮಾರು 242 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.

ಅಭ್ಯರ್ಥಿಯಾಗಿರುವವರು ಎಲ್ಲ ಮಾಹಿತಿ ನೀಡಬೇಕಾದ ಕಾರಣ ಸುರೇಂದ್ರನ್ ಅವರು ಇತ್ತೀಚೆಗೆ ತಮ್ಮ ಮೇಲಿರುವ ಎಲ್ಲ ಪ್ರಕರಣಗಳ ವಿವರಗಳನ್ನು ಪಕ್ಷದ ಮುಖವಾಣಿಯ ಮೂರು ಪುಟಗಳಲ್ಲಿ ಪ್ರಕಟಿಸಿದ್ದರು. ಅದೇ ರೀತಿ ಬಿಜೆಪಿಯ ಎರ್ನಾಕುಲಂ ಕ್ಷೇತ್ರದ ಅಭ್ಯರ್ಥಿ ಕೆ ಎಸ್ ರಾಧಾಕೃಷ್ಣನ್ ವಿರುದ್ಧ ಸುಮಾರು 211 ಪ್ರಕರಣಗಳಿವೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್, “ಹೆಚ್ಚಿನ ಪ್ರಕರಣಗಳು 2018ರಲ್ಲಿ ನಡೆದ ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿವೆ. ಹೆಚ್ಚಿನ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಪಕ್ಷದ ಮುಖಂಡರು ಮುಷ್ಕರ ಅಥವಾ ಪ್ರತಿಭಟನೆಗೆ ಕರೆ ನೀಡಿದಾಗ ಪೊಲೀಸರು ಅದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುತ್ತಾರೆ. ಅಭ್ಯರ್ಥಿಗಳ ವಿರುದ್ಧದ ಪ್ರಕರಣಗಳ ವಿವರಗಳನ್ನು ಪ್ರಕಟಿಸುವುದು ಕಡ್ಡಾಯವಾಗಿದೆ” ಎಂದು ಹೇಳಿದ್ದಾರೆ.

ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಶುಕ್ರವಾರ ಸುರೇಂದ್ರನ್, ರಾಧಾಕೃಷ್ಣನ್, ಬಿಜೆಪಿಯ ಅಲಪ್ಪುಳದ ಅಭ್ಯರ್ಥಿ ಶೋಭಾ ಸುರೇಂದ್ರನ್ ಮತ್ತು ವಟಕರ ಅಭ್ಯರ್ಥಿ ಪ್ರಫುಲ್ ಕೃಷ್ಣ ವಿರುದ್ಧದ ಪ್ರಕರಣಗಳ ವಿವರಗಳನ್ನು ಟ್ವೀಟ್ ಮಾಡಿದ್ದಾರೆ.

“ಭಾರತದ ಕೆಲವು ಭಾಗಗಳಲ್ಲಿ ರಾಷ್ಟ್ರೀಯವಾದಿಯಾಗುವುದು ಕಷ್ಟ. ಇದು ದೈನಂದಿನ ಹೋರಾಟ. ಆದರೆ ಹೋರಾಟಕ್ಕೆ ಯೋಗ್ಯವಾಗಿದೆ” ಎಂದು ಹೇಳಿಕೊಂಡಿದ್ದಾರೆ. ಬಿಜೆಪಿ ರಾಜ್ಯ ಮುಖ್ಯಸ್ಥರ ವಿರುದ್ಧದ ಪ್ರಕರಣಗಳ ವಿವರವನ್ನು ನೀಡಿದ ಕುರಿಯನ್, ಶಬರಿಮಲೆ ಪ್ರತಿಭಟನೆಗೆ ಸಂಬಂಧಿಸಿದಂತೆ 237 ಪ್ರಕರಣಗಳು ಮತ್ತು ಕೇರಳದಲ್ಲಿ ವಿವಿಧ ಆಂದೋಲನಗಳಿಗೆ ಸಂಬಂಧಿಸಿದಂತೆ ಐದು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

ಪತ್ತನಂತಿಟ್ಟ ಜಿಲ್ಲೆಯ ಬೆಟ್ಟದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶದ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿಗೊಳಿಸುವ ಕೇರಳ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಮತ್ತು ಅಂಗಸಂಸ್ಥೆಗಳು 2018 ರಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಿದ್ದವು. ಇತರೆ ಪಕ್ಷದ ಅಭ್ಯರ್ಥಿಗಳ ಪ್ರಕರಣದ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!