Thursday, September 19, 2024

ಪ್ರಾಯೋಗಿಕ ಆವೃತ್ತಿ

ಜನರ ಸೇವೆ ಮಾಡಲೆಂದು ರಾಜಕೀಯ ಕ್ಷೇತ್ರಕ್ಕೆ ಬಂದಿದ್ದೇನೆ: ಸ್ಟಾರ್ ಚಂದ್ರು

ನಾನು ಒಬ್ಬ ಸಾಮಾನ್ಯ ರೈತನ ಮಗನಾಗಿದ್ದು ಕಷ್ಟಪಟ್ಟು ಶ್ರಮದಿಂದ ಮೇಲೆ ಬಂದಿದ್ದು ಜನರ ಸೇವೆ ಮಾಡಲೆಂದು ರಾಜಕೀಯ ಕ್ಷೇತ್ರಕ್ಕೆ ಬಂದಿದ್ದೇನೆ. ಜಿಲ್ಲೆಯ ರೈತರ ಸ್ವಾಭಿಮಾನ ಎತ್ತಿಹಿಡಿಯಲು ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ತಮಗೊಂದು ಅವಕಾಶ ನೀಡುವಂತೆ ಮಂಡ್ಯ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಕೈ ಮುಗಿದು ಮನವಿ ಮಾಡಿದರು.

ಕೆ.ಆರ್.ಪೇಟೆ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಬಸವೇಶ್ವರ ದೇವಾಲಯದ ಆವರಣದಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ಮಂಡ್ಯ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಕೋರಿದ ಅವರು, ತಮಗೆ ರಾಜಕಾರಣ ಹೊಸದಲ್ಲ, ತಮ್ಮ ಸಂಬಂಧಿಕರು ರಾಜಕಾರಣದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ದಿಯ ಬಗ್ಗೆ ಹಲವು ಕನಸುಗಳನ್ನು ಹೊಂದಿದ್ದೇನೆ ಎಂದರು.

ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಕಾಂಗ್ರೆಸ್ ಮುಖಂಡರಾದ ಬಿ.ಎಲ್. ದೇವರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಾಜಶೇಖರ್, ಕೆ.ಬಿ.ಮಹೇಶ್, ಸ್ನೇಹಿತ ರಮೇಶ್, ಹಾಫಿಜುಲ್ಲಾ ಷರೀಫ್, ಆಯಾಜ್ ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!