ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆದ ಡಾ.ಕುಮಾರ ಅವರು ಇಂದು ಕೆ.ಆರ್.ಪೇಟೆ ತಾಲ್ಲೂಕಿನ ಆನೆಗೋಳ ಚೆಕ್ ಪೋಸ್ಟ್ ಹಾಗೂ ಕೆ.ಆರ್.ಪೇಟೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಮತ ಯಂತ್ರಗಳ ಭದ್ರತಾ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚೆಕ್ ಪೋಸ್ಟ್ ಸಿಬ್ಬಂದಿಗಳಿಂದ ನಿರ್ವಹಿಸುತ್ತಿರುವ ಪ್ರತಿದಿನದ ವರದಿ ಹಾಗೂ ಮಾಹಿತಿಯನ್ನು ಪಡೆದುಕೊಂಡರು. ಚೆಕ್ ಪೋಸ್ಟ್ ಸಿಬ್ಬಂದಿಗಳು ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯುತವಾಗಿ ವಾಹನಗಳ ತಪಾಸಣೆ ನಡೆಸಿ ಅಕ್ರಮ ವ್ಯವಹಾರ ನಡೆಯದಂತೆ ಎಚ್ಚರ ವಹಿಸಿ ನಿಗಾ ಇಡಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಸಹಾಯಕ ಚುನಾವಣಾಧಿಕಾರಿ ಚಂದ್ರಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಕಿಕ್ಕೇರಿ ಠಾಣೆಯ ರೇವತಿ, ಪಟ್ಟಣ ಪೊಲೀಸ್ ಠಾಣೆಯ ಬಿ. ಸುಮಾರಾಣಿ, ರಾಜಶ್ವನಿರೀಕ್ಷಕ ಜ್ಞಾನೇಶ್, ಗ್ರಾಮ ಆಡಳಿತ ಅಧಿಕಾರಿಗಳಾದ ಜಗದೀಶ್, ಸೋಮಚಾರಿ ಮತ್ತಿತರರು ಉಪಸ್ಥಿತರಿದ್ದರು.