Friday, September 20, 2024

ಪ್ರಾಯೋಗಿಕ ಆವೃತ್ತಿ

ಹೆಚ್.ಡಿ.ಕೆ ಗೆದ್ದರೆ ಸಚಿವ ಸ್ಥಾನದ ಅವಕಾಶವಿದೆ: ಸುರೇಶ್ ಕುಮಾರ್

ಏಪ್ರಿಲ್ 26ರಂದು ನಡೆಯುವ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಂಡ್ಯದ ಪ್ರತಿನಿಧಿಯಾಗಿ ಆಯ್ಕೆ ಮಾಡಿದರೆ ಬಹಳ ವರ್ಷಗಳ ನಂತರ ಮಂಡ್ಯಕ್ಕೆ ಕೇಂದ್ರ ಸಚಿವ ಸ್ಥಾನ ಸಿಗುವ ಅವಕಾಶವಿದೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಮಂಡ್ಯದ ವಕೀಲರ ಸಂಘದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹೆಚ್.ಡಿ. ಕುಮಾರಸ್ವಾಮಿ ಅವರ ಪರ ವಕೀಲರ ಬಳಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

ವಕೀಲರು ತಮ್ಮದೇ ಆದ ಪ್ರಭಾವಶಾಲಿ ಇಟ್ಟುಕೊಂಡಿದ್ದೇವೆ, ಚಿಂತನಶಕ್ತಿ ಇದೆ ಆದ್ದರಿಂದ ವಕೀಲರು ಕಕ್ಷಿದಾರರ ಮೂಲಕ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಹುಮತದಿಂದ ಆಯ್ಕೆ ಮಾಡಲು ಸಹಕರಿಸಬೇಕು ಎಂದು ಹೇಳಿದರು.

ಜನಸಾಮಾನ್ಯರ ಹಿತಕ್ಕೆ ಇರುವ ಗ್ಯಾರಂಟಿ ಅದು ನರೇಂದ್ರ ಮೋದಿ ಗ್ಯಾರಂಟಿ ರಾಷ್ಟ್ರೀಯ ಹಿತ ದೃಷ್ಟಿಯಿಂದ ಈ ಚುನಾವಣೆ ಮಹತ್ವವಾದ ಚುನಾವಣೆಯಾಗಿದೆ ಎಂದು ಹೇಳಿದರು.

ದೇಶದ ಹಿತ ದೃಷ್ಟಿಯಿಂದ ನಿರ್ಣಾಯಕ ಹೆಜ್ಜೆ ಇಡುವ ನಾಯಕ ಇದ್ದಾನೆ ಎಂದರೆ ಅದು ಮೋದಿ. ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿ ಕೆಲಸ ಮಾಡುವ ಗ್ರಾಮ ವಾಸ್ತವ್ಯದ ಮೂಲಕ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದಾರೆ ಎಂದು ಹೇಳಿದರು.

ಜೆಡಿಎಸ್ ರಾಜ್ಯಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್, ಉಪಾಧ್ಯಕ್ಷ ಕೆ.ಎಂ.ಬಸವರಾಜು
ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್.ರಘು ನಂದನ್, he ಸಿದ್ದರಾಜು, ಮಹೇಶ್,ಇತರರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!