Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ: ಸಿಎಂ ಸಿದ್ದರಾಮಯ್ಯ

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, “ಪ್ರಜ್ವಲ್​ ರೇವಣ್ಣನ ಪಾಸ್​ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಮೋದಿ ಸರ್ಕಾರ ಪ್ರಜ್ವಲ್ ರಕ್ಷಣೆ ‌ಮಾಡುತ್ತಿದೆ” ಎಂದು ಆರೋಪಿಸಿದರು.

“ಮಹಿಳೆಯರ ಮೇಲೆ ಅನ್ಯಾಯ ನಡೆದಿದೆ. ಹೆಚ್ ​ಡಿ ಕುಮಾರಸ್ವಾಮಿ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಎಂದು ಹೇಳಿದ್ದರು. ನನ್ನ ಮಗ ನಿಖಿಲ್​ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಈಗ ವಕೀಲರನ್ನು ಕರೆಯಿಸಿ ಯಾಕೆ ಚರ್ಚೆ ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದರು.

“ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ” ಎಂದು ಪ್ರಶ್ನಿಸಿದರು.

“ಸಂತ್ರಸ್ತ ಮಹಿಳೆಯ ಅಪಹರಣ ಮಾಡಲಾಗಿದೆ ಎಂಬ ದೂರು ದಾಖಲಾಗಿದೆ. ಆ ಹೆಣ್ಣು ಮಗಳ ರಕ್ಷಣೆಗೆ ದಾವಿಸಿ ಎಂದಿದ್ದೇನೆ. ಅಧಿಕಾರಿಗಳು ಪತ್ತೆ ಹಚ್ಚುತ್ತಾರೆ” ಎಂದು ಹೇಳಿದರು.

ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ: ಡಿಕೆ ಶಿವಕುಮಾರ್​

“ಪ್ರಕರಣದ ತನಿಖೆಗೆ ಪೊಲೀಸರಿಗೆ ಫ್ರೀ ಹ್ಯಾಂಡ್ ನೀಡಲಾಗಿದೆ. ಬಿಜೆಪಿಯವರು ಈಗ ಯಾಕೆ ಯಾರು ಮಾತನಾಡುತ್ತಿಲ್ಲ. ಸಿ.ಟಿ.ರವಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸದಾನಂದಗೌಡ, ಆರ್​. ಅಶೋಕ್​​ ಎಲ್ಲಿ ಹೋದರು? ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆಂದು ಹೇಳುತ್ತಾರೆ, ಈಗ ಮಹಿಳೆಯರಿಗೆ ಅನ್ಯಾಯ ಆಗಿದೆ ಯಾಕೆ ಮಾತನಾಡಿಲ್ಲ. ಸಂತ್ರಸ್ತ ಮಹಿಳೆಯರಿಗೆ ಧೈರ್ಯ ಹೇಳುವ ಕೆಲಸ ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!