ಕೊಟ್ಟಿಗೆಯಿಂದ ಹೊರಗಡೆ ಕಟ್ಟುವ ವೇಳೆ ಗೂಳಿ ತಿವಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದ ಬಳಿ ನಡೆದಿದೆ.
ಯಳಂದೂರು ತಾಲ್ಲೂಕು ಹನ್ನೂರು ಗ್ರಾಮದ ಲೇಟ್ ಗೂಳಿ ನಂಜಯ್ಯ ಎಂಬುವವರ ಮಗ ರಂಗಯ್ಯ(60) ಗೂಳಿ ತಿವಿತಕ್ಕೊಳಗಾಗಿ ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದು, ಆತ ಮಹದೇವಪುರ ಗ್ರಾಮದ ಬಳಿಯ ನಮಿತ್ ವರ್ಮಾ ಎಂಬುವವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದನು ಎನ್ನಲಾಗಿದೆ.
ಮಂಗಳವಾರ ಈ ಘಟನೆ ಸಂಭವಿಸಿದ್ದು, ಈ ಸಂಬಂಧ ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.