“ಇಲ್ಲಿಯವರೆಗೂ, ನಾಲ್ವರು ಚುನಾವಣಾಧಿಕಾರಿಗಳು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು, ವಾಸ್ತವ್ಯ ಹಾಗೂ ಇತರ ಸೌಲಭ್ಯಗಳನ್ನು ಪ್ರತಿ ರವಾನೆ ಕೇಂದ್ರಗಳಲ್ಲಿ ಲಭ್ಯವಿರಿಸಲಾಗಿದೆ. ಆದರೂ ಅನಿರೀಕ್ಷಿತ ಘಟನೆ ಸಂಭವಿಸಿದೆ” ಎಂದು ಮಹೇಂದ್ರ ಕುಮಾರ್ ತಿಳಿಸಿದ್ದಾರೆ.
ಉತ್ತರ ಭಾರತದ 37 ನಗರಗಳಲ್ಲಿ ಕಳೆದ 2 ದಿನಗಳಿಂದ ತೀವ್ರ ಬಿಸಿಲನ ತಾಪ ಸಂಭವಿಸಿದ್ದು,10 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನವದೆಹಲಿಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ 52.3 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿತ್ತು.
ಜೂನ್ 1 ರಂದು ನಡೆಯುವ ಏಳನೇ ಹಾಗೂ ಅಂತಿಮ ಲೋಕಸಭಾ ಚುನಾವಣೆಯಲ್ಲಿ ಬಿಹಾರದ 8 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರೊಂದಿಗೆ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 57 ಸ್ಥಾನಗಳಿಗೆ ಮತದಾನ ನಡೆಯಲಿದೆ.