ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ 62ನೇ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶನಿವಾರ ಮಂಡ್ಯನಗರದಲ್ಲಿ ಹಲವು ಸಮಾಜ ಸೇವಾ ಕಾರ್ಯಗಳನ್ನು ಮಾಡುವುದರ ಮೂಲಕ ಸಂಭ್ರಮದಿಂದ ಅಷ್ಟೇ ಅರ್ಥಪೂರ್ಣವಾಗಿ ಆಚರಣೆ ಮಾಡಿದರು.
ಶನಿವಾರ ಬೆಳಿಗ್ಗೆ ಮಂಡ್ಯನಗರದ ವಿದ್ಯಾನಗರದ ಗಣಪತಿದೇವಸ್ಥಾನದಲ್ಲಿ ಸಚಿವ ಚಲುವರಾಯಸ್ವಾಮಿ ಅವರ ಹೆಸರಿನಲ್ಲಿ ಮಾಜಿ ಶಾಸಕ ಹೆಚ್.ಪಿ.ರಾಮು, ಕಾಂಗ್ರೆಸ್ ಮುಖಂಡ ಕಂಬದಹಳ್ಳಿ ಪುಟ್ಟಸ್ವಾಮಿ, ತಾಪಂ. ಮಾಜಿ ಅಧ್ಯಕ್ಷ ತ್ಯಾಗರಾಜು ರವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಹೆಚ್.ಬಿ.ರಾಮು ಮಾತನಾಡಿ, ಚಲುವರಾಯಸ್ವಾಮಿ ಅವರಿಗೆ ದೇವರು ಆಯಸ್ಸು, ಆರೋಗ್ಯ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದೇವೆ, ಅವರ ನೇತೃತ್ವದಲ್ಲಿ ಜಿಲ್ಲೆಯ ಅಭಿವೃದ್ಧಿ ಪಥದಲ್ಲಿ ನಡೆಯಲಿ ಎಂದು ಹಾರೈಸಿದರು.
ತಾ.ಪಂ.ಮಾಜಿ ಅಧ್ಯಕ್ಷ ತ್ಯಾಗರಾಜು, ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬ ಅಂಗವಾಗಿ ಮಿಮ್ಸ್ ಆಸ್ಪತ್ರೆಯಲ್ಲಿ ಜನಿಸಿದ ಮಕ್ಕಳಿಗೆ ಹೊಸ ಬಟ್ಟೆ, ತೆಂಗಿನ ಸಸಿಗಳನ್ನು ವಿತರಣೆ ಮಾಡಲಾಗುತ್ತಿದೆ. ಅದಲ್ಲದೇ ಅನ್ನದಾಸೋಹವನ್ನು ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿಯೂ ಕೂಡ ಆಯೋಜಿಸಲಾಗಿದೆ ಎಂದರು.
ನಂತರ ಮಂಡ್ಯ ಮಿಮ್ಸ್ ಆವರಣದ ಮಮತೆಯ ಮಡಿಲು ಆಶ್ರಯದಲ್ಲಿ ರೋಗಿಗಳಿಗೆ ಮತ್ತು ಅವರ ಪಾಲಕರಿಗೆ ಬೆಳಗಿನ ಉಪಹಾರವನ್ನು ಕಾಂಗ್ರೆಸ್ ಕಾರ್ಯುಕರ್ತರು ವಿತರಣೆ ಮಾಡಿದರು. ಅಲ್ಲದೇ ಮದ್ಯಾಹ್ನನದ ಊಟ ಮತ್ತು ರಾತ್ರಿ ಊಟವನ್ನು ಉಚಿತವಾಗಿ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಮಿಮ್ಸ್ ಆಸ್ಪತ್ರೆಯಲ್ಲಿ 62 ಮಕ್ಕಳಿಗೆ ಬಟ್ಟೆಗಳು, ಹಾಗೂ 62 ತೆಂಗಿನ ಸಸಿ ವಿತರಿಸಲಾಯಿತು. ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದಾನ
ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ಮತ್ತು ಅನಿಲ್ ಕುಮಾರ್ ನೇತೃತ್ವದಲ್ಲಿ ಮಿಮ್ಸ್ ನ ರಕ್ತನಿಧಿ ಕೇಂದ್ರದಲ್ಲಿ 62 ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು. ಕಾಂಗ್ರೆಸ್ ಮುಖಂಡ ಶಿವನಂಜು ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಸ್ವರ್ಣಸಂದ್ರದ ಪ್ರೇರಣ ಅಂಧ ಮಕ್ಕಳ ಶಾಲೆಯಲ್ಲಿ ಲಘು ಉಪಹಾರ ನೀಡಲಾಯಿತು.