Thursday, September 19, 2024

ಪ್ರಾಯೋಗಿಕ ಆವೃತ್ತಿ

ಹೆಚ್.ಡಿ ರೇವಣ್ಣಕ್ಕೆ ಹೈಕೋರ್ಟ್ ನೋಟೀಸ್: ಬಂಧನ ಭೀತಿ

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್‌ ಡಿ ರೇವಣ್ಣಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಐದು ದಿನದೊಳಗೆ ವಿಚಾರಣೆಗೆ ಹಾಜರಾಗಲು ತಿಳಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆ ಪಿಎಸ್‌ಐ ಅಜಯ್​​ ಅವರು ಜೂನ್ 2ರಂದು ಹರದನಹಳ್ಳಿ ರೇವಣ್ಣನ ಮನೆಗೆ ಹೈಕೋರ್ಟ್​ನ ನೋಟಿಸ್ ಅಂಟಿಸಿದ್ದಾರೆ. ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಎಸ್​ಐಟಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆ, ಕೋರ್ಟ್​ ಇದೀಗ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಹೆಚ್‌.ಡಿ. ರೇವಣ್ಣ ಅವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ. ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಹೈಕೋರ್ಟ್​ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮೈಸೂರಿನ ಕೆ.ಆರ್.​ಪೇಟೆಯಲ್ಲಿ ದಾಖಲಾಗಿರುವ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.​ಡಿ.ರೇವಣ್ಣ ಅವರನ್ನು ಎಸ್​ಐಟಿ ಬಂಧಿಸಿತ್ತು. ಆದರೆ, ರೇವಣ್ಣ ಅವರು ಕೋರ್ಟ್​ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ  ಪತ್ನಿ ಭವಾನಿ ರೇವಣ್ಣ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಜಾ ಮಾಡಿದೆ. ಈ ಹಿನ್ನೆಲೆ, ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದರೆ, ಭವಾನಿ ರೇವಣ್ಣ ತಲೆಮರಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!