ಒಕ್ಕಲಿಗರ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಪಡೆಯಲು ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವೆ ಘನ ಘೋರ ಯುದ್ದವೇ ನಡೆದು ಹೋಗಿದೆ.ಆದರೆ ಲೋಕಸಭೆಯ ಚುನಾವಣೆಯಲ್ಲಿ ಒಕ್ಕಲಿಗರ ನಾಯಕ ನಾನೇ ಎಂದು ಕುಮಾರಸ್ವಾಮಿ ಸಾಬೀತು ಪಡಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸ್ವಂತ ತಮ್ಮ ಡಿ.ಕೆ. ಸುರೇಶ್ ಅವರನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಜೊತೆಗೆ ಮಂಡ್ಯ, ಮೈಸೂರು, ತುಮಕೂರಿನಂತಹ ಒಕ್ಕಲಿಗರ ಪ್ರಾಬಲ್ಯದ ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯವಾಗಿಲ್ಲ. ಈ ಮೂಲಕ ಕುಮಾರಸ್ವಾಮಿ ಒಕ್ಕಲಿಗರಿಗೆ ನಾನೇ ನಾಯಕ ಮತ್ತು ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಬಲ ಎನ್ನುವುದನ್ನು ರುಜುವಾತು ಪಡಿಸಿಕೊಂಡಿದ್ದಾರೆ.