Thursday, October 24, 2024

ಪ್ರಾಯೋಗಿಕ ಆವೃತ್ತಿ

ಹೆಚ್.ಕೆ.ರಾಮು ಗೆಲ್ಲುವ ವಿಶ್ವಾಸವಿದೆ : ಸಿಎಸ್ಪಿ

ಪಾಂಡವಪುರ ಪಟ್ಟಣದಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್.ಕೆ. ರಾಮು ಪರವಾಗಿ ಶಾಸಕ ಸಿ.ಎಸ್.ಪುಟ್ಟರಾಜು, ಜೆಡಿಎಸ್ ಮುಖಂಡರು, ಕಾರ್ಯಕರ್ತರೊಂದಿಗೆ ಪದವೀಧರ ಮತದಾರರಲ್ಲಿ ಮತಯಾಚಿಸಿದರು.

ತಾಲೂಕು ಕಚೇರಿ, ಸೆಸ್ಕ್ ಕಚೇರಿ, ಬಿಜಿಎಸ್, ಬರ್ಡ್ಸ್ ಶಾಲೆ, ಸರ್ಕಾರಿ ಶಾಲೆ, ಬಿಇಓ ಕಚೇರಿ, ಬಾಲಕಿಯರ ಕಾಲೇಜು ಸೇರಿದಂತೆ ಪಟ್ಟಣದ ಸರ್ಕಾರಿ ಕಚೇರಿಗಳು ಹಾಗೂ ಶಾಲೆಗಳಿಗೆ ಶಾಸಕ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ, ಮತದಾರರಿಗೆ ಕರಪತ್ರ ವಿತರಿಸಿ, ರಾಮು ಅವರ ಪರವಾಗಿ ಮತಯಾಚಿಸಿದರು.

ಕುಪೇಂದ್ರ ರೆಡ್ಡಿ ಗೆಲ್ಲುವ ವಿಶ್ವಾಸ

ಶಾಸಕ ಸಿ.ಎಸ್.ಪುಟ್ಟರಾಜು ಮಾತನಾಡಿ, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಗೆಲ್ಲುವ ನಿರೀಕ್ಷೆ ನಮಗಿದೆ. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲೂ ಜೆಡಿಎಸ್ ಅಭ್ಯರ್ಥಿ ರಾಮು ಗೆಲ್ಲಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಅರ್ಚನಾ, ಉಪಾಧ್ಯಕ್ಷೆ ಶ್ವೇತಾ, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ನಿರ್ದೇಶಕ ಕಣಿವೆ ಯೋಗೇಶ್, ಕಸಬಾ ಸೊಸೈಟಿ ಅಧ್ಯಕ್ಷ ಮಹೇಶ್ ಸೇರಿದಂತೆ ಅನೇಕರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!