ಮಳವಳ್ಳಿ ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷ ಪ್ರಭು ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷ ಬಿ.ಕೆ ರವಿ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗಧಿಯಾಗಿದ್ದು, 16 ಜನ ಸದ್ಯಸರು ಇದ್ದು ಅಧ್ಯಕ್ಷ ಸ್ಥಾನಕ್ಕೆ ಪ್ರಭು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಚುನಾವಣಾಧಿಕಾರಿ ಹರೀಶ್ ಅವರು ಪ್ರಭು ಅವಿರೋಧ ಆಯ್ಕೆಯಾಗಿದ್ದಾರೆಂದು ಘೋಷಣೆ ಮಾಡಿದರು.
ನಂತರನೂತನ ಅಧ್ಯಕ್ಷ ಪ್ರಭು ಮಾತನಾಡಿ, ನೆಚ್ಚಿನ ಶಾಸಕರ ಆದ ಪಿ.ಎಂ ನರೇಂದ್ರಸ್ವಾಮಿ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯದ ವಿಶ್ವಾಸ್ ಸಹಕಾರದಿಂದ ಅವಿರೋಧವಾಗಿ ಆಯ್ಕೆ ಆಗಿದ್ದು, ಅವಿರೋಧವಾಗಿ ಆಯ್ಕೆ ಮಾಡಿದ ಸದಸ್ಯರಿಗೆ ಧನ್ಯವಾದಗಳು, ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸದಸ್ಯರ ಜೊತೆಗೂಡಿ ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಸಾಗಿಸುತ್ತೇನೆ ಎಂದು ತಿಳಿಸಿದರು.
ಈ ವೇಳೆ ತಾ.ಪಂ ಮಾಜಿ ಅಧ್ಯಕ್ಷ ವಿಶ್ವಾಸ ಸೇರಿದಂತೆ ಗ್ರಾಮಸ್ಥರು ನೂತನ ಅಧ್ಯಕ್ಷ ಪ್ರಭುರನ್ನು ಅಭಿನಂದಿಸಿದರು.
ಸದಸ್ಯರಾದ ಮಹಾದೇವ ಸ್ವಾಮಿ, ಗುಂಡ ಶೆಟ್ಟಿ, ರವಿ, ಶಾರದಮ್ಮ, ಶೀಲಾ, ಚಿನ್ನಮ್ಮ, ಪ್ರಕಾಶ್, ಮಹದೇವು, ನಾಗಮ್ಮ,ಶಿವಸ್ವಾಮಿ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.