ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಅರುಣ್ ವಿ.ಸೋಮಣ್ಣ ವಿರುದ್ಧ ವಂಚನೆ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ.
ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ವಂಚನೆ ನಡೆಸಿದ್ದಾರೆ ಎಂದು ದಂಪತಿಗಳು ದೂರು ದಾಖಲಿಸಿದ್ದು ಅದರಂತೆ ಎಫ್ಐಆರ್ ದಾಖಲಿಸಲಾಗಿದೆ. ತಮಗೆ ಜೀವಬೆದರಿಕೆ ಇರುವುದಾಗಿಯೂ ದಂಪತಿಗಳು ದೂರಿನಲ್ಲಿ ಹೇಳಿದ್ದಾರೆ.
ಬೆಂಗಳೂರಿನ ಸಂಜಯ ನಗರ AECS ನಿವಾಸಿಯಾದ ತೃಪ್ತಿ ಹೆಗಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಎಫ್ಐಆರ್ ದಾಖಲಿಸದ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
ನ್ಯಾಯಾಲಯದ ಆದೇಶದಂತೆ ಈಗ ಅರುಣ್ ಸೋಮಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.