Thursday, October 24, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕುಡುಕ ಯುವಕನಿಂದ ವೃದ್ಧೆಯ ಕೊಲೆ

ಮಂಡ್ಯನಗರದ ಆನೆಕೆರೆ ಬೀದಿಯಲ್ಲಿ ಘಟನೆಯಲ್ಲಿ ವೃದ್ಧೆಯೊಬ್ಬರನ್ನು ಯುವಕ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ.

ಕೆಂಪಮ್ಮ(80) ಹತ್ಯೆಯಾದ ವೃದ್ಧೆಯಾಗಿದ್ದು, ಮೈದುನನ ಮಗ ಹರೀಶ್ ಎಂಬಾತನಿಂದ ಕೊಲೆ ಮಾಡಿದ್ದಾನೆ.

ಯುವಕ ಕುಡಿದು ಬಂದ ಸಂದರ್ಭದಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ, ಈ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಯುವಕ ವೃದ್ದೆಯ ಕತ್ತು ಕೊಯ್ದು ಕೊಲೆ ಮಾಡಿ, ಪರಾರಿಯಾಗಿದ್ದಾನೆ.

ಮಂಡ್ಯನಗರದ ಸೆಂಟ್ರಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!