ಮಂಡ್ಯನಗರದ ಆನೆಕೆರೆ ಬೀದಿಯಲ್ಲಿ ಘಟನೆಯಲ್ಲಿ ವೃದ್ಧೆಯೊಬ್ಬರನ್ನು ಯುವಕ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಇಂದು ನಡೆದಿದೆ.
ಕೆಂಪಮ್ಮ(80) ಹತ್ಯೆಯಾದ ವೃದ್ಧೆಯಾಗಿದ್ದು, ಮೈದುನನ ಮಗ ಹರೀಶ್ ಎಂಬಾತನಿಂದ ಕೊಲೆ ಮಾಡಿದ್ದಾನೆ.
ಯುವಕ ಕುಡಿದು ಬಂದ ಸಂದರ್ಭದಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದೆ, ಈ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಯುವಕ ವೃದ್ದೆಯ ಕತ್ತು ಕೊಯ್ದು ಕೊಲೆ ಮಾಡಿ, ಪರಾರಿಯಾಗಿದ್ದಾನೆ.
ಮಂಡ್ಯನಗರದ ಸೆಂಟ್ರಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.