ಮಂಡ್ಯ ನಗರದಲ್ಲಿರುವ ವಿವೇಕಾನಂದ ನಗರದಲ್ಲಿ ಡಾ. ಬಾಬು ಜಗಜೀವನ ರಾಮ್ ಭವನ ನಿರ್ಮಾಣಕ್ಕೆ ಮುಡಾ ನೀಡಿರುವ ನಿವೇಶನವನ್ನು ಮಂಜೂರು ಮಾಡಿದ್ದು, ಕೂಡಲೇ ಜಿಲ್ಲಾ ಭವನದ ಕಾಮಗಾರಿ ಪ್ರಾರಂಭಿಸುವಂತೆ ಅಖಿಲ ಕರ್ನಾಟಕ ಡಾ.ಬಾಬು ಜಗಜೀವನ ರಾಮ್ ಸಂಘಗಳ ಒಕ್ಕೂಟದ ಮಂಡ್ಯ ಜಿಲ್ಲಾಧ್ಯಕ್ಷ ಎನ್.ಆರ್.ಚಂದ್ರಶೇಖರ್ ನೇತೃತ್ವದಲ್ಲಿ ಪದಾಧಿಕಾರಿಗಳು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಕಾವೇರಿ ಉದ್ಯಾನವನದಲ್ಲಿರುವ ಡಾ ಬಾಬು ಜಗಜೀವನ ರಾಮ್ ಪ್ರತಿಮೆ ಮುಂಭಾಗ ಶನಿವಾರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ ಡಾ. ಬಾಬು ಜಗಜೀವನ ರಾಮ್ ಪುಣ್ಯ ಸ್ಮರಣ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷ ಎನ್ ಆರ್ ಚಂದ್ರಶೇಖರ್, ಹಸಿರು ಕ್ರಾಂತಿ ಹರಿಕಾರ ಮಾಜಿ ಉಪ ಪ್ರಧಾನಿ ರಾಷ್ಟ್ರ ನಾಯಕ ಡಾ. ಬಾಬು ಜಗಜೀವನ ರಾಂ ಅವರ ಹೆಸರಿನಲ್ಲಿ ಜಿಲ್ಲಾ ಮಟ್ಟದ ಭವನ ಕಾಮಗಾರಿಯನ್ನು ಪ್ರಾರಂಭಿಸುವಂತೆ ಹಲವು ವರ್ಷಗಳಿಂದ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಂದಿದ್ದೇವೆ, ಭವನ ನಿರ್ಮಾಣಕ್ಕೆ 4 ಕೋಟಿ ಹಣ ಮೀಸಲಿದ್ದು ಸಮಾಜ ಕಲ್ಯಾಣ ಇಲಾಖೆ ಮಂಜೂರಾತಿ ನೀಡಿದ್ದು ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವಂತೆ ಒತ್ತಾಯಿಸಿದರು.
ಅದೇ ರೀತಿ ಜಿಲ್ಲೆಯ ಶ್ರೀರಂಗಪಟ್ಟಣ ಹಾಗೂ ಕೆ ಆರ್ ಪೇಟೆ ತಾಲೂಕು ಮಟ್ಟದ ಭವನಗಳ ಕಾಮಗಾರಿಯು ಪೂರ್ಣಗೊಳ್ಳುವ ಹಂತದಲ್ಲಿದ್ದು, ಅಂತಿಮ ಕೆಲಸಕ್ಕೆ ಹಣ ಬಿಡುಗಡೆ ಮಾಡಿಸಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸುವಂತೆ ಒತ್ತಾಯಿಸಿದರು.
ಅಲ್ಲದೇ ನಾಗಮಂಗಲ, ಮದ್ದೂರು, ಮಳವಳ್ಳಿ ತಾಲೂಕು ಮಟ್ಟದ ಭವನಕ್ಕೆ ನಿವೇಶನ ಮಂಜೂರು ಮಾಡಿ ಕೊಟ್ಟಿ ಜಿಲ್ಲಾಡಳಿತಕ್ಕೆ ಆದೇಶ ನೀಡಬೇಕು ಎಂದು ಆಗ್ರಹಿಸಿದರು
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾಗ ಕಾಂತರಾಜ್, ವಕೀಲ ಕೆಂಪಯ್ಯ, ಎಂ ಪಿ ಚಂದ್ರಶೇಖರ್, ಬಿಳಿಯಪ್ಪ, ಶಾಂಭವಿ, ಶಂಭು ಮೊತ್ತಹಳ್ಳಿ, ಶಂಕರ್, ಶಿವಬೋರ ಹಂಪಾಪುರ, ಪುಟ್ಟರಾಜು ಹೆಚ್ ಎಂ ಉಪಸ್ಥಿತರಿದ್ದರು.