Friday, October 18, 2024

ಪ್ರಾಯೋಗಿಕ ಆವೃತ್ತಿ

ತಮಿಳುನಾಡಿಗೆ ನೀರು ಬಿಡಲು ಆದೇಶ| ಹೆಚ್.ಡಿ.ಕುಮಾರಸ್ವಾಮಿ ಮಧ್ಯಪ್ರವೇಶಕ್ಕೆ ಚಲುವರಾಯಸ್ವಾಮಿ ಆಗ್ರಹ

ಮಂಡ್ಯ ಸಂಸದರಾದ ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿದ್ದಾರೆ, ಚುನಾವಣೆ ಸಮಯದಲ್ಲಿ ಅವರು “ಕಾವೇರಿ ವಿಚಾರವನ್ನು ಪೂರ್ಣ ಪ್ರಮಾಣದಲ್ಲಿ ಮೊದಲ ಆದ್ಯತೆಯಾಗಿ ತೆಗೆದುಕೊಳ್ಳುತ್ತೇನೆ” ಎಂದು ಜನರಿಗೆ ಭರವಸೆ ಕೊಟ್ಟಿದ್ದಾರೆ, ಅದರಂತೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಾವೇರಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ, ಪ್ರಾಧಿಕಾರ ಆದೇಶವನ್ನು ತಡೆ ಹಿಡಿಯಬೇಕೆಂದು ಕೃಷಿ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ಕಾವೇರಿ ಸಮಸ್ಯೆ ಬಗೆಹರಿಸುವುದಾಗಿ ಕುಮಾರಸ್ವಾಮಿ ಅವರು ನೀಡಿದ ಭರವಸೆಯ ಕಾರಣಕ್ಕೇ ಅವರಿಗೆ ಅಷ್ಟು ದೊಡ್ಡಮಟ್ಟದ ಗೆಲುವು ಸಿಕ್ಕಿತ್ತು. ಕ್ಷೇತ್ರದ ಜನರಿಗೆ ಕೊಟ್ಟ ಭರವಸೆ ಈಡೇರಿಸಲು ಇದೀಗ ಅವರಿಗೆ ಒಳ್ಳೆಯ ಅವಕಾಶ ಬಂದಿದೆ ಎಂದು ಅವರು ನೆನಪಿಸಿದ್ದಾರೆ.

“>

 

ಹೆಚ್.ಡಿ.ಕುಮಾರಸ್ವಾಮಿ ಅವರು ಇಂದೇ ಪ್ರಧಾನಮಂತ್ರಿಗಳನ್ನು ಹಾಗೂ ನೀರಾವರಿ ಸಚಿವರನ್ನು ಭೇಟಿ ಮಾಡಿ ತಕ್ಷಣ ಸಮಿತಿಯು ತಮಿಳುನಾಡಿಗೆ ನೀರು ಬಿಡುವ ತೀರ್ಮಾನವನ್ನು ಹಿಂಪಡೆಯುವಂತೆ ಮಾಡಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!