Thursday, September 19, 2024

ಪ್ರಾಯೋಗಿಕ ಆವೃತ್ತಿ

ಭಾರೀ ಮಳೆ | KRS ಅಣೆಕಟ್ಟೆಯಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕಾವೇರಿಯ ಉಪನದಿಗಳಾದ ಹಾರಂಗಿ, ಹೇಮಾವತಿ, ಲಕ್ಷ್ಮಣತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ, ಇದರಿಂದ ಕೆ.ಆರ್.ಎಸ್ ಅಣೆಕಟ್ಟೆಗೆ ಭಾರೀ ಒಳಹರಿವು ಹರಿದು ಬರುತ್ತಿದ್ದು, ಒಂದು ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಸಲು ನಿರ್ಧರಿಸಲಾಗಿದೆ.

ಸದ್ಯ ಅಣೆಕಟ್ಟೆಯಿಂದ 70 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದ್ದು, ಇದರ ಪ್ರಮಾಣವು ರಾತ್ರಿ ವೇಳೆಗೆ 1 ಲಕ್ಷ ಕ್ಯೂಸೆಕ್ ನಿಂದ ಒಂದೂವರೆ ಲಕ್ಷ ಕ್ಯೂಸೆಕ್ಸ್ ಗೆ ಏರಿಯಾಗುವ ಸಂಭವವಿದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಾನಗಳಿಗೆ ತೆರಳಲು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.

ಹಾಸನ ಜಿಲ್ಲೆಯ ಹೇಮಾವತಿ (ಗೊರೂರು) ಅಣೆಕಟ್ಟೆಯು ಭರ್ತಿಯಾಗಿದ್ದು, ಸುಮಾರು 50 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿರುವುದರಿಂದ ಕೆ.ಆರ್.ಎಸ್ ನ ಒಳ ಹರಿವು ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!