Friday, September 20, 2024

ಪ್ರಾಯೋಗಿಕ ಆವೃತ್ತಿ

ಶಿವಮೊಗ್ಗ| ಕಾಂಗ್ರೆಸ್ ಕಾರ್ಯಕರ್ತರಿಂದ ಯಡಿಯೂರಪ್ಪ ಮನೆ ಮುತ್ತಿಗೆಗೆ ಯತ್ನ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಭಾನುವಾರ ಪ್ರತಿಭಟನೆ ನಡೆಸಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಾ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಯಡಿಯೂರಪ್ಪ ಮನೆ ರಸ್ತೆ ತುದಿಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು.

ನಂತರ ರಾಜ್ಯಪಾಲರು,ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ದಿಕ್ಕಾರ ಕೂಗಿ ಯಡಿಯೂರಪ್ಪ ನಿವಾಸಕ್ಕೆ ನುಗ್ಗಲು ಪ್ರಯತ್ನಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಿ ಬಿಡುಗಡೆಗೊಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!