ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್ ಅವರಿಗೆ ರಾಜಾತಿಥ್ಯ ಲಭ್ಯವಾಗುತ್ತಿರುವುದನ್ನು ಸೂಚಿಸುವ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಈ ಬೆನ್ನಲ್ಲೇ ದರ್ಶನ್ ಸ್ಥಳಾಂತರ ಮಾಡಲಾಗುತ್ತಿದೆ.
ಮುಂಜಾನೆ 4 ಗಂಟೆಯಿಂದ ಸ್ಥಳಾಂತರ ಪ್ರಕ್ರಿಯೆ ಆರಂಭವಾಗಿದ್ದು, ಐದು ಗಂಟೆಗಳ ಪ್ರಯಾಣದ ಬಳಿಕ ದರ್ಶನ್ ಅವರು ಮುಂಜಾನೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಜೈಲು ತಲುಪಿದ್ದಾರೆ.
ಬಿಗಿ ಭದ್ರತೆಯಲ್ಲಿ ಬಳ್ಳಾರಿಯ ಜೈಲಿಗೆ ಪೊಲೀಸ್ ವಾಹನಗಳು ತಲುಪಿದೆ. ಈ ನಡುವೆ ನೂರಾರು ಅಭಿಮಾನಿಗಳು ಬಳ್ಳಾರಿ ಜೈಲಿನ ಹೊರಗೆ ಜಮಾಯಿಸಿದ್ದರು.
VIDEO | Kannada actor Darshan Thoogudeepa, who was in judicial custody at Parappana Agrahara Central jail in #Bengaluru, in the Renukaswamy murder case, was shifted to #Ballari prison, late yesterday.
(Full video available on PTI Videos – https://t.co/n147TvqRQz) pic.twitter.com/c7q5QI8q4A
— Press Trust of India (@PTI_News) August 29, 2024
“>