ರೈತರೊಬ್ಬರ ಕೆಲಸ ಮಾಡಿಕೊಡಲು ಹತ್ತು ಸಾವಿರ ರೂಪಾಯಿಗಳ ಲಂಚದ ಬೇಡಿಕೆ ಇಟ್ಟು, ಹಣ ಪಡೆದುಕೊಳ್ಳುವಾಗ ಮಂಡ್ಯ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ತಿಪ್ಪೇಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮರಕಾಡದೊಡ್ಡಿಯ ಮೋಹನ್ ಎಂಬುವವರ ಬಳಿ ತಿಪ್ಪೇಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಲೋಕಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯ ಲೋಕಾಯುಕ್ತ ಸಿಪಿಐ ಬ್ಯಾಟರಾಯಗೌಡ ನೇತೃತ್ವದ ತಂಡ ಇಂದು ದಾಳಿ ನಡೆಸಿ, ತಿಪ್ಪೇಸ್ವಾಮಿಯನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದೆ.