Thursday, September 19, 2024

ಪ್ರಾಯೋಗಿಕ ಆವೃತ್ತಿ

ಧರ್ಮಸ್ಥಳ ಸಂಘದ ಬಡ್ಡಿ ದಂಧೆಯ ವಿರುದ್ದ ಗುಡುಗಿದ ನರೇಂದ್ರಸ್ವಾಮಿ

ಹೆಸರಿಗಷ್ಟೇ ಅದು ಧರ್ಮಸ್ಥಳ ಸಂಘ, ಅದರಲ್ಲಿ ಧರ್ಮವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡುತ್ತಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳವಳ್ಳಿ ತಾಲ್ಲೂಕಿನ ಹಾಡ್ಲಿ ಪಂಚಾಯಿತಿ ವ್ಯಾಪ್ತಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,  ಕೇವಲ 10, 20 ಸಾವಿರ ರೂಪಾಯಿ ಸಾಲ ಪಡೆದು ಹೆಚ್ಚಿಗೆ ಬಡ್ಡಿ ಕಟ್ಟಿಸಿಕೊಳ್ಳುತ್ತಾರೆ. ಆದರೆ, ಜನರಿಗೆ ಇದು ಗೊತ್ತಾಗುತ್ತಿಲ್ಲ. ಅದು ಹೆಸರಿಗಷ್ಟೆ ಧರ್ಮಸ್ಥಳ ಸಂಘ. ಧರ್ಮಸ್ಥಳ ಸಂಘದಲ್ಲಿ ಧರ್ಮದ ಕಾರ್ಯ ನಡೆಯುತ್ತಿಲ್ಲ. ಆ ಶೋಷಣೆ ತಪ್ಪಿಸಲು ತಿಂಗಳಿಗೆ 2 ಸಾವಿರ ಕೊಡುತ್ತಿದ್ದೇವೆ ಎಂದರು.

ಧರ್ಮಸ್ಥಳ ಸಂಘವನ್ನು ಬಿಟ್ಟು ಮಹಿಳೆಯರು ನಮ್ಮ ಸರ್ಕಾರದ ಸಂಜೀವಿನಿ ಯೋಜನೆಯ ಮೂಲಕ ತಮ್ಮ ಕೆಲಸ ಮಾಡಿಕೊಳ್ಳಿ. ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ ಎಂದು ಶಾಸಕರು ಸಲಹೆ ನೀಡಿದ್ದಾರೆ. ಮೊದಲು ಗ್ರಾಮೀಣ ಮಹಿಳೆಯರನ್ನು ಇಂತಹ ಮೈಕ್ರೋ ಫೈನಾನ್ಸ್ ಗಳ ಸುಳಿಯಿಂದ ಹೊರತರಬೇಕು ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!