ಪ್ರತಿಯೊಬ್ಬ ವ್ಯಕ್ತಿಯ ದೈಹಿಕ – ಮಾನಸಿಕವಾಗಿ ಆರೋಗ್ಯವಾಗಿರಬೇಕಾದರೆ ಕ್ರೀಡೆ ಅಗತ್ಯ ಎಂದು ನಗರಸಭೆ ಉಪಾಧ್ಯಕ್ಷ ಎಂ.ಪಿ ಅರುಣ್ ಕುಮಾರ್ ತಿಳಿಸಿದರು.
ಮಂಡ್ಯ ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಗರಸಭೆಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಪೌರಕಾರ್ಮಿಕರಿಗೆ, ಸ್ವಚ್ಛತಾ ಕಾರ್ಮಿಕರಿಗೆ ನಗರಸಭಾ ಸದಸ್ಯರಿಗೆ, ನಗರಸಭೆಯ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟದ ಉದ್ಘಾಟಿಸಿ ಅವರು ಮಾತನಾಡಿದರು.
ಪೌರಕಾರ್ಮಿಕಲ್ಲೂ ಕ್ರೀಡಾಸಕ್ತಿ ಮೂಡಿಸುವ ಉದ್ದೇಶದಿಂದ ಈ ಕ್ರೀಡಾಕೂಟ ಆಯೋಜಿಸಲಾಗಿದೆ, ಎಲ್ಲ ಪೌರಕಾರ್ಮಿಕರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬದಿಗಿರಿಸಿ ಕ್ರೀಡೆಯಲ್ಲಿ ಭಾಗವಹಿಸಬೇಕೆಂದರು.
ನಗರಸಭೆ ಅಧ್ಯಕ್ಷ ಎಂ. ವಿ.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಸೌಭಾಗ್ಯ, ಮಂಜುಳಾ, ನಾಗೇಶ್, ರಾಮಲಿಂಗಯ್ಯ, ಎಇಇ ರವಿಕುಮಾರ್ ಪರಿಸರ ವಿಭಾಗದ ಅಭಿಯಂತರ ರುದ್ರೇಗೌಡ, ವ್ಯವಸ್ಥಾಪಕರಾದ ಕಲ್ಪನಾ, ಆರೋಗ್ಯ ಪರಿವೀಕ್ಷಕರಾದ ಚೆಲುವರಾಜು, ನಾಗರಾಜು ಇನ್ನಿತರದಿದ್ದರು.