Monday, September 23, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ‘ಪ್ರವಾದಿ ಮುಹಮ್ಮದ್’ ಲೇಖನ ಸಂಕಲನ ಪುಸ್ತಕ ಬಿಡುಗಡೆ ಮಾಡಿದ ನಿರ್ಮಲಾನಂದನಾಥಶ್ರೀ

ಮಂಡ್ಯ ಜಿಲ್ಲೆ,ನಾಗಮಂಗಲ ತಾಲ್ಲೂಕು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ “ಸೀರತ್”ಅಭಿಯಾನದ ಕೊನೆಯ ದಿನದಂದು ದೇಶದ ಪ್ರತಿಷ್ಠಿತ ಮಠಗಳಲ್ಲೊಂದಾದ ಆದಿಚುಂಚನಗಿರಿಯಲ್ಲಿ ಪ್ರವಾದಿ ಮುಹಮ್ಮದ್(ಸ) ಲೇಖನ ಸಂಕಲನ ಪುಸ್ತಕವನ್ನು ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಬಿಡುಗಡೆಗೊಳಿಸಿ,ವಿಚಾರ ವಿನಿಮಯ ನಡೆಸಿದರು.

ದೇಶದಾದ್ಯಂತ ನೂರಾರು ಕಡೆಗಳಲ್ಲಿ ವ್ಯಾಪಿಸಿರುವ ಆದಿ ಚುಂಚನಗಿರಿ ಶಾಖಾ ಮಠಗಳ ಮೂಲ ಮಠದಲ್ಲಿ ಸೀರತ್ ಅಭಿಯಾನದ ಕೊನೆಯ ದಿನದ ಭಾಗವಾಗಿ ಜಮಾಅತೆ ಇಸ್ಲಾಮೀ ಇ ಹಿಂದ್ ಮೈಸೂರು ವಲಯ ಸ್ಥಾನೀಯರಿಂದ ಮಹಾ ಸಂಸ್ಥಾನ ಮಠದ ನಿರ್ಮಲಾನಂದ ಸ್ವಾಮೀಜಿಯವರನ್ನು ಸಂದರ್ಶಿಸಿ ಸೀರತ್ ಅಭಿಯಾನ ಪ್ರಯುಕ್ತ ಶಾಂತಿ ಪ್ರಕಾಶನ ಹೊರತಂದಿರುವ “ಪ್ರವಾದಿ ಮುಹಮ್ಮದ್(ಸ) ಲೇಖನ ಸಂಕಲನ” ಪುಸ್ತಕವನ್ನು ನೀಡಿ ಮಾಹಿತಿ ನೀಡಲಾಯಿತು, ತರುವಾಯ ಸ್ವಾಮೀಜಿಯವರು ಪುಸ್ತಕ ಬಿಡುಗಡೆ ಮಾಡಿ ಶುಭ ಹಾರೈಸಿದರು.

ವಿವಿಧ ಪ್ರವಾದಿಗಳ ಬಗ್ಗೆ ವಿಶೇಷವಾಗಿ ಪ್ರವಾದಿ ಮುಹಮ್ಮದ್ (ಸ) ಕುರಿತು ಸುಮಾರು ಅರ್ಧ ಗಂಟೆಗಳ ಕಾಲ ತಮ್ಮ ಪೀಠದಲ್ಲಿ ಕುಳಿತುಕೊಂಡು ಸಂದರ್ಶಕರ ಸಮ್ಮುಖದಲ್ಲಿ ವಿಚಾರ ವಿನಿಮಯ ನಡೆಸಿದರು.

ಜಮಾಅತ್ ತಂಡದಲ್ಲಿ ಮೈಸೂರು ವಲಯ ಸಂಚಾಲಕ ಅಬ್ದುಲ್ ಸಲಾಂ ಯು, ಮೈಸೂರು ಸ್ಥಾನೀಯ ಉಪಾಧ್ಯಕ್ಷ ಅಸಾದುಲ್ಲಾ, ಸದಸ್ಯರಾದ ಅಬ್ದುಲ್ ವಾಹಿದ್ ಅಲಿ, ಫಯಾಝ್ ಮಲಿಕ್ ಹಾಗೂ ಪತ್ರಕರ್ತ ಮೋಹನ್ ಮೈಸೂರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!