Saturday, October 19, 2024

ಪ್ರಾಯೋಗಿಕ ಆವೃತ್ತಿ

ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಬಸ್ ಪಲ್ಟಿಗೆ ಕಾರಣ: ಶಾಸಕ ರವಿಕುಮಾರ್ ಕಿಡಿ

ಬೆಂಗಳೂರು- ಮೈಸೂರು ‌ರಾಷ್ಟ್ರೀಯ ಹೆದ್ದಾರಿಯ ಸ್ಯಾಂಜೋ ಆಸ್ಪತ್ರೆ ಬಳಿ ಕಂಟೈನರ್ ಗೆ ಡಿಕ್ಕಿ ಹೊಡೆದು ಕೆಎಸ್ಆರ್’ಟಿಸಿ ಬಸ್ ಪಲ್ಪಿಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮಂಡ್ಯ ಶಾಸಕ ರವಿಕುಮಾರ್, ಈ ದುರ್ಘಟನೆಗೆ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯೇ ಕಾರಣವಾಗಿದೆ ಎಂದು ಕಿಡಿಕಾರಿದರು.

ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿರುವ 20ಕ್ಕೂ ಹೆಚ್ಚು ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡಲಾಗುವುದು, ಸೂಪರ್ ಹೈವೇನಲ್ಲಿ ಸೂಪರ್ ಅಪಘಾತಗಳು ನಡೆಯುತ್ತಿದೆ. ಕೇಂದ್ರ ಸರ್ಕಾರ ಗುಜರಾತ್ ಹಾಗೂ ಮಹಾರಾಷ್ಟ್ರದ ಗುತ್ತಿಗೆದಾರರಿಗೆ ಕೆಲಸ ಕೊಡುವುದಕ್ಕಾಗಿ ಬೇಕಾಬಿಟ್ಟಿಯಾಗಿ ಕಾಮಗಾರಿ ನಡೆಸಿದೆ. ಕಾಮಗಾರಿ ಹೆಸರಿನಲ್ಲಿ 10 ಸಾವಿರ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಲೂಟಿ ಮಾಡಿದೆ. ಈ ಬಗ್ಗೆ ಸಮಗ್ರವಾದ ತನಿಖೆ ನಡೆಯಬೇಕೆಂದು ಆಗ್ರಹಿಸಿದರು.

20ಕ್ಕೂ ಗಾಯಾಳುಗಳನ್ನು ಸ್ಯಾಂಜೋ ಆಸ್ಪತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

1 COMMENT

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!