ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ಗಾಂಧಿ ಜಯಂತಿ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಮತ್ತು ಪಾನಮುಕ್ತರ ಸಮಾವೇಶ ಕಾರ್ಯಕ್ರಮವನ್ನು ನಾಗಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅ.4ರಂದು 10.30 ಕ್ಕೆ ಏರ್ಪಡಿಸಲಾಗಿದೆ ಎಂದು ಜನಜಾಗೃತಿ ವೇದಿಕೆ ಅಧ್ಯಕ್ಷ ಕೊಣನೂರು ಹನುಮಂತಯ್ಯ ತಿಳಿಸಿದರು.
ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾರಂಭದ ಉದ್ಘಾಟನೆಯನ್ನು ಕೃಷಿ ಸಚಿವ ಚಲುವರಾಯಸ್ವಾಮಿ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಹನುಮಂತಯ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಜಯರಾಮ ನೆಲ್ಲಿತಾಯ, ರಾಮಸ್ವಾಮಿ, ವಿವೇಕ್ ವಿನ್ಸೆಂಟ್ ಪಾಯಸ, ಜಿ ಬಿ. ಶಿವರಾಜ್, ವೆಂಕಟರಮಣಗೌಡ. ಗೌರೀಶ್, ಚಂದ್ರು, ನಿರಂಜನ್ ಭಾಗವಹಿಸುವರು. ಆದ್ದರಿಂದ ಈ ಸಮಾವೇಶದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ತಾಲೂಕು ಯೋಜನಾಧಿಕಾರಿಗಳಾದ ದಿವಾಕರ್, ಮಂಜೇಶ್ ಉಪಸ್ಥಿತರಿದ್ದರು.