Saturday, October 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.6ರಂದು ಮತ್ತೆ ಮತ್ತೆ ಗಾಂಧಿ ಕಾರ್ಯಕ್ರಮ

ಮಂಡ್ಯನಗರದ ಗಾಂಧಿಭವನದಲ್ಲಿ ಚಿತ್ರಕೂಟ ದ ವತಿಯಿಂದ ಅ.6ರಂದು ಭಾನುವಾರ ಸಂಜೆ 4ರಿಂದ 6.30ವರೆಗೆ ಹಾಡು, ಹಸೆ, ಕವಿತೆಗಳ ಜತೆ ಮಾತುಕತೆ ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ.

ಡಾ.ಹೊ.ಶ್ರೀನಿವಾಸಯ್ಯ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ನಾಡೋಜ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಶಿಕ್ಷಣ ತಜ್ಞ ವೂಡೇ ಪಿ. ಕೃಷ್ಣ ಉದ್ಘಾಟನೆ ಮಾಡುವರು. ಮುಖ್ಯ ಅತಿಥಿಗಳಾಗಿ ರಂಗಾಯಣ ಮಾಜಿ ನಿರ್ದೇಶಕ ಸಿ. ಬಸವಲಿಂಗಯ್ಯ, ಲಂಕೇಶ್ ಪತ್ರಿಕೆ ಅಂಕಣಕಾರ ಬಿ. ಚಂದ್ರೇಗೌಡ, ನಾಟಕ ಅಕಾಡೆಮಿ ಮಾಜಿ ಸದಸ್ಯ ಮಲ್ಲಿಕಾರ್ಜುನ ಮಹಾಮನೆ ಭಾಗವಹಿಸುವರು.

ಸಾಮಾಜಿಕ ಚಿಂತಕ ಹೆಚ್.ಕೆ. ವಿವೇಕಾನಂದ, ಈ ದಿನ.ಕಾಮ್ ವಿಭಾಗ ಮುಖ್ಯಸ್ಥ ಡಾ.ಬಿ.ಸಿ. ಬಸವರಾಜು ಹಾಗೂ ಸಹ ಪ್ರಾಧ್ಯಾಪಕರಾದ ಡಾ. ಶಿಲ್ಪಶ್ರೀ ಹರವು ವಿಶೇಷ ಉಪನ್ಯಾಸ ನೀಡುವರು.

ಹರವು ದೇವೇಗೌಡ ಕಾರ್ಯಕ್ರಮ ನಿರೂಪಣೆ ಮಾಡುವರು. ನಾರಾಯಣ ತಿರುಮಲಾಪುರ, ಕೆ.ಪಿ.ಮೃತ್ಯುಂಜಯ, ವಿನಯ್ ಕುಮಾರ್ ಎಂ.ಜಿ., ಸದ್ಧಾಂ ತಗ್ಗಹಳ್ಳಿ, ರಂಜಿತಾ ದರ್ಶಿನಿ ಕವಿತಾ ವಾಚನ ಮಾಡುವರು. ಇದೇ ಸಂದರ್ಭದಲ್ಲಿ ಕೊಪ್ಪದ ಸೌಹಾರ್ದ ಸಂಘಕ್ಕೆ ಚಿತ್ರಕೂಟ ಪುರಸ್ಕಾರ ಪ್ರದಾನ ಮಾಡಲಾಗುವುದು.

nudikarntaka.com

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!