ಕೆ ಆರ್ ಪೇಟೆ ತಾಲ್ಲೂಕು ಬೂಕನಕೆರೆ ಸಮೀಪ ಮೋದೂರು ಗ್ರಾಮದ ಬಳಿ ಬೈಕ್ ಸವಾರನ ನಿಯಂತ್ರಣ ತಪ್ಪಿ ನಿಂತ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿದ ಘಟನೆ ವರದಿಯಾಗಿದೆ.
ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ ಅತಿಯಾದ ವೇಗದಲ್ಲಿದ್ದ ಬೈಕ್ ಸವಾರನಿಗೆ ಬೈಕ್ ನಿಯಂತ್ರಣ ಮಾಡಲಾಗದೆ, ನಿಂತ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನುತ್ತಾರೆ.
ಮೃತಪಟ್ಟ ಬೈಕ್ ಸವಾರ ಶ್ರೀರಂಗಪಟ್ಟಣ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ಶ್ರೇಯಸ್ ಗೌಡ (27) ಎಂದು ತಿಳಿದು ಬಂದಿದ್ದು,ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ,ಸ್ಥಳ ಪರಿಶೀಲನೆ ನಡೆಸಿ
ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.