ಮಂಡ್ಯ ಯೂಥ್ ಗ್ರೂಪ್ ವತಿಯಿಂದ ವಿಜಯದಶಮಿ ಅಂಗವಾಗಿ ಡಾ.ಅನಿಲ್ ಆನಂದ್ ನೇತೃತ್ವದಲ್ಲಿ ಮಂಡ್ಯನಗರದಲ್ಲಿ ಶನಿವಾರ ಸಾಂಸ್ಕೃತಿಕ ದಸರಾ ಆಚರಿಸಲಾಯಿತು.
ಮಂಡ್ಯನಗರದ ಕಾಳಿಕಾಂಭ ದೇವಾಲಯದ ಬಳಿಯ ಗಜೇಂದ್ರ ಮೋಕ್ಷ ಕೊಳದ ಆವರಣದಲ್ಲಿರುವ ಬನ್ನಿಮರಕ್ಕೆ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಪೂಜೆ ಸಲ್ಲಿಸಿ ಬೆಳ್ಳಿರಥದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿ ವಿಗ್ರಹಕ್ಕೆ ಪೂಜೆ ನೆರವೇರಿಸಿ ಉತ್ಸವಕ್ಕೆ ಚಾಲನೆ ನೀಡಿದರು. ವಿಶ್ವಮಾನವ ಶಾಖಾ ಮಠದ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ಭಾಗವಹಿಸಿದ್ದರು.
ಜನಪದ ಕಲಾ ತಂಡಗಳೊಂದಿಗೆ ಹೊರಟ ಮೆರವಣಿಗೆ ನಂದ ವೃತ್ತ ಮಹಾವೀರ ವೃತ್ತ ವಿ. ವಿ. ರಸ್ತೆ, ಹೊಸಹಳ್ಳಿ ವೃತ್ತ ನೂರಡಿ ರಸ್ತೆಯ ಮಾರ್ಗವಾಗಿ ತೆರಳಿ ಬನ್ನೂರು ರಸ್ತೆಯ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಂತ್ಯಗೊಂಡಿತು.
ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ನಯೀಮ್, ಕಾಂಗ್ರೆಸ್ ಮುಖಂಡರಾದ ಆದರ್ಶ್, ಮಹೇಶ್, ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷರಾದ ಅಪ್ಪಾಜಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.