ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಬೋಳಮಾರನಹಳ್ಳಿ ಗ್ರಾಮದ ಕೆರೆಯು ನಿರಂತರ ಮಳೆಯಿಂದಾಗಿ ಕೋಡಿ ಬಿದ್ದು ಹರಿಯುತ್ತಿದ್ದು ಏರಿಯು ಒಡೆಯುವ ಭೀತಿ ಎದುರಾಗಿ ಸ್ಥಳೀಯರಲ್ಲಿ ಆತಂಕ ಉಂಟು ಮಾಡಿದೆ.
ಈ ಕೆರೆಯ ಸೇತುವೆಯು ಗಿಡಗಂಟಿಗಳಿಂದ ಮುಚ್ಚಿಕೊಂಡಿದ್ದು ಮೇಲ್ನೋಟಕ್ಕೆ ಕಾಣದಂತಾಗಿದೆ. ಸಂಬಂಧಪಟ್ಟ ಹೇಮಾವತಿ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಕ್ರಮವಹಿಸಿಲ್ಲ ಎಂದು ಅಧಿಕಾರಿಗಳ ವಿರುದ್ಧ ಬೋಳಮಾರನಹಳ್ಳಿ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇನ್ನಾದರೂ ತನ್ನ ಜಾಣ ನಡೆಯನ್ನು ಬಿಟ್ಟು ಸೂಕ್ತ ಕ್ರಮ ಕೈಗೊಂಡು ಸಾವಿರಾರು ಜನರ ರಕ್ಷಣೆಗೆ ಮುಂದಾಗಬೇಕೆಂದು ಸ್ಥಳೀಯರು ಒತ್ತಾಯಿಸಿದರು.