ಚಿತ್ರನಟ ದರ್ಶನ್ ಹಾಗೂ ಆತನ ಗ್ಯಾಂಗಿನಿಂದ ಬರ್ಬರವಾಗಿ ಕೊಲೆಯಾಗಿದ್ದ ಎನ್ನಲಾದ ಚಿತ್ರದುರ್ಗದ ರೇಣುಕಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಬೆಳಗಿನ ಜಾವ 6 ಗಂಟೆ 55 ನಿಮಿಷದಲ್ಲಿ ಚಿತ್ರದುರ್ಗ ನಗರದ ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ಸಹನಾ ಮಗುವಿಗೆ ಜನ್ಮ ನೀಡಿದರು.
ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗು ಜನನ ಹಿನ್ನೆಲೆ, ವೈದ್ಯಾಧಿಕಾರಿಗಳು ಮಗುವನ್ನು ನಿಗಾವಹಿಸಲು ಅಬ್ಸರ್ವೇಶನ್ಲ್ಲಿ ಇಟ್ಟಿದ್ದಾರೆ.ಗಂಡು ಮಗು ಜನನದಿಂದ ಮೃತ ರೇಣುಕಾ ಸ್ವಾಮಿ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿದೆ.
ಮಗನೇ ಹುಟ್ಟಿ ಬಂದಷ್ಟು ಸಂತೋಷ
ಮೃತ ರೇಣುಕಾಸ್ವಾಮಿ ಮನೆಗೆ ಮೊಮ್ಮಗನ ಆಗಮನ ಹಿನ್ನೆಲೆಯಲ್ಲಿ ಕುಟುಂಬಸ್ಥರಲ್ಲಿ ಸಂಭ್ರಮ, ಸಂತಸ ಮನೆ ಮಾಡಿದೆ. ಮೊಮ್ಮಗ ಜನ್ಮ ಸಂಭ್ರಮದ ವೇಳೆ ಮಾಧ್ಯಮಗಳ ಮುಂದೆ ಮೊದಲ ಬಾರಿಗೆ ಮಾತನಾಡಿಸ ರೇಣುಕಾ ಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಸಂತೋಷದ ನಗೆ ಬೀರಿದ್ದಾರೆ. ಕಾಶೀನಾಥ ಶಿವನಗೌಡ್ರ ಮಾತನಾಡಿ, ನಮ್ಮ ಮಗನೇ ಹುಟ್ಟಿ ಬಂದಷ್ಟು ಸಂತೋಷವಾಗಿದೆ ಎಂದರು.
ಪತಿಯ ಸಾವಿನ ಬಳಿಕ ಸಹನಾ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಕುಟುಂಬಸ್ಥರು ಅವರಿಗೆ ಸಾಂತ್ವಾನ ಹೇಳಿದ್ದರು. ಇದೀಗ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಅವರು ಗಂಡು ಮಗುವಿಗೆ ಜನನ ನೀಡಿದ್ದಾರೆ. ರೇಣುಕಾಸ್ವಾಮಿ ಮಗನ ರೂಪದಲ್ಲಿ ಮತ್ತೆ ಹುಟ್ಟಿ ಬಂದಿದ್ದಾನೆ ಎಂದು ಕುಟುಂಬಸ್ಥರು ಸಮಾಧಾನ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ರೇಣುಕಾ ಸ್ಬಾಮಿ ಕೊಲೆ ಆರೋಪ ಹೊತ್ತಿರುವ ಚಿತ್ರನಟ ದರ್ಶನ್, ಪವಿತ್ರಗೌಡ ಜಾಮೀನು ನಿರಾಕರಣೆಯಿಂದ ನಿಟ್ಟುಸಿರು ಬಿಟ್ಟಿದ್ದ, ರೇಣುಕಾ ಸ್ವಾಮಿ ಪೋಷಕರು ಇದೀಗ ಮೊಮ್ಮಗನ ಜನನದಿಂದ ಸಂತೋಷ ಗೊಂಡಿದ್ದಾರೆ.