Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾಸಂಸ್ಥೆ ವ್ಯಾಪ್ತಿಯಲ್ಲಿ ತಂಬಾಕು ಮಾರಬೇಡಿ

ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳ ವ್ಯಾಪ್ತಿಯಲ್ಲಿ ಶೇ.100ರಷ್ಟು ತಂಬಾಕು ಮುಕ್ತಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ನಿರಂತರ ಕೋಟ್ಪಾ ಕಾರ್ಯಾಚರಣೆ ಇಂದು ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆಯಿತು.

ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಸಂಜಯ್ ಎಂ ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಧುಸೂದನ್ ಹಾಗೂ ಆರಕ್ಷಕ ವೃತ್ತ ನಿರೀಕ್ಷಕರಾದ ದೀಪಕ್ ರವರ ಮಾರ್ಗದರ್ಶನದಲ್ಲಿ ಕೆ ಆರ್ ಪೇಟೆ ಟೌನ್ ನ ಶಾಲಾ ಕಾಲೇಜುಗಳ ಬಳಿ ಕೋಟ್ಪಾ ಕಾರ್ಯಾಚರಣೆ ನಡೆಸಲಾಯಿತು.

ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ವಿದ್ಯಾಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿರುವ ಹಾಗೂ ಬಳಕೆಯಲ್ಲಿದ್ದವರಿಗೆ ದಂಡ ವಿಧಿಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಸೆಕ್ಷನ್ 4 ರ ಅಡಿಯಲ್ಲಿ 13 ಪ್ರಕರಣ ರೂ 2300/- ದಂಡ ಮತ್ತು ಸೆಕ್ಷನ್ 6ಬಿ ರ ಅಡಿಯಲ್ಲಿ 14 ಪ್ರಕರಣ ರೂ 1800/- ದಂಡ ಒಟ್ಟಾರೆಯಾಗಿ 27 ಪ್ರಕರಣಗಳನ್ನು ದಾಖಲಿಸಿ ರೂ 4100/- ದಂಡ ವಿಧಿಸಲಾಯಿತು. ಹಾಗೆಯೇ ಇನ್ನು ಮುಂದೆ ಈ ರೀತಿಯಾಗಿ ನಿಯಮ ಉಲ್ಲಂಘನೆ ಮಾಡದಂತೆ ಹಾಗೂ ಕೆ‌.ಆರ್. ಪೇಟೆ ಸಾರ್ವಜನಿಕ ಆಸ್ಪತ್ರೆಯ ತಂಬಾಕು ವ್ಯಸನಮುಕ್ತ ಕೇಂದ್ರದ ಉಚಿತ ಸೇವಾ ಸೌಲಭ್ಯಗಳನ್ನು ಬಳಸಿಕೊಳ್ಳಲು ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿ ತಿಳುವಳಿಕೆ ಮೂಡಿಸಲಾಯಿತು.

ಇಂದಿನ ಕಾರ್ಯಾಚರಣೆಯಲ್ಲಿ ಜಿಲ್ಲಾ ಸಲಹೆಗಾರರಾದ ತಿಮ್ಮರಾಜು ಎಸ್.ಎನ್. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ, ಸಮಾಜ ಕಾರ್ಯಕರ್ತರಾದ ಮೋಹನ್ ಕುಮಾರ್, ವೈ.ಕೆ, ಎಎಸ್ಐ ಮರಿಯಪ್ಪ, ಮುಖ್ಯ ಪೇದೆ ಹಾಲೇಗೌಡ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!