Thursday, September 19, 2024

ಪ್ರಾಯೋಗಿಕ ಆವೃತ್ತಿ

ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಿದ ಸಚ್ಚಿದಾನಂದ

ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಹಾಗೂ ಕಾಲೇಜಿನ ಸುಮಾರು 600ಕ್ಕು ಹೆಚ್ಚು ಮಕ್ಕಳಿಗೆ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ನೋಟ್‌ ಪುಸ್ತಕಗಳನ್ನು ನೀಡಲಾಯಿತು.

ಟ್ರಸ್ಟ್ ಅಧ್ಯಕ್ಷ ಇಂಡುವಾಳು ಸಚ್ಚಿದಾನಂದ ನೋಟ್ ಬುಕ್ ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು,
ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆಯಾಗದಂತೆ ಎಲ್ಲ ಸೌಲಭ್ಯ ಒದಗಿಸೋದು ನಮ್ಮ ಕರ್ತವ್ಯ.ಹಾಗಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ನೋಟ್ ಬುಕ್ ವಿತರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ,ಸದಸ್ಯರು, ಸ್ಥಳೀಯ ಮುಖಂಡರು, ಯಜಮಾನರಾದ ಶ್ರೀನಿವಾಸಗೌಡ, ಬಲಮುರಿ ದೇವಾಲಯಗಳ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಮಂಜುನಾಥ್ , ಗ್ರಾ.ಪಂ.ಅಧ್ಯಕ್ಷರಾದ ಕಾಂತರಾಜು, ಆರ್ಮುಗ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೀಪು, ವಿಎಸ್‌ಎಸ್‌ಎನ್ ಮಾಜಿ ನಿರ್ದೇಶಕ ನಾಗೇಂದ್ರ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಆನಂದೂರು ಚಂದು ಹಾಗೂ ಚೇತು ಹೊಸಳ್ಳಿ ಅವರು ಸಚ್ಚಿದಾನಂದ ಅವರನ್ನು ಸನ್ಮಾನಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!