Friday, September 20, 2024

ಪ್ರಾಯೋಗಿಕ ಆವೃತ್ತಿ

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣಗೆ ಅದ್ದೂರಿ ಸ್ವಾಗತ

ಜುಲೈ 28 ರಂದು ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್‌ರೋಣ ಸಿನಿಮಾವು ರಾಷ್ಟ್ರಾದ್ಯಂತ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ರತ್ನ, ಬಾದ್‌ಷಾ ಕಿಚ್ಚ ಸುದೀಪ್ ಸೇನೆಯ ವತಿಯಿಂದ ಮಳವಳ್ಳಿ ಪಟ್ಟಣದ ಮಹಾಲಕ್ಷ್ಮಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ಶುಭ ಕೋರುವ ಮತ್ತು ಸಿಹಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಿಚ್ಚ ಸುದೀಪ್ ಸೇನೆಯ ರಾಜ್ಯಾಧ್ಯಕ್ಷ ಶಿವರಾಜ್ ನಾಯಕ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಿಚ್ಚ ಸುದೀಪ್‌ ಅವರ ನೂರಾರು ಅಭಿಮಾನಿಗಳು ಮಹಾಲಕ್ಷ್ಮಿ ಚಿತ್ರಮಂದಿರ ಆವರಣದಲ್ಲಿ ಜಮಾವಣೆಗೊಂಡು ಸುದೀಪ್ ಕಟೌಟ್‌ಗೆ ಹೂವಿನಿಂದ ಆಲಂಕರಿಸುವುದರ ಜೊತೆಗೆ ಹಾಲಿನ ಅಭಿಷೇಕ ಹಾಗೂ ಸಿನಿಮಾ ನೋಡಲು ಬಂದ ಪ್ರೇಕ್ಷಕರಿಗೆ ಸಿಹಿ ವಿತರಣೆ ಮಾಡಲಾಗುವುದು ಎಂದರು.

ಕನ್ನಡ ಚಿತ್ರವೊಂದು ಮೊದಲ ಬಾರಿಗೆ ರಾಷ್ಟ್ರಾದ್ಯಂತ 3500 ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುವುದರ ಜೊತೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಬಿಡುಗಡೆಯಾಗುತ್ತಿರುವ ವಿಕ್ರಾಂತ್‌ರೋಣ ಚಲನಚಿತ್ರವು ಶತದಿನೋತ್ಸವ ಆಚರಿಸಲಿ ಎನ್ನುವ ಆಶಯದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಗುತ್ತಿದ್ದು, ಸುದೀಪ್ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.

ಇದೇ ಸಂಧರ್ಭದಲ್ಲಿ ಸುರೇಶ್, ವೆಂಕಟೇಶ್, ಮಂಜು, ಮಧುಚಂದ್ರ, ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!