ಮಂಡ್ಯ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ದಕ್ಷ ಅಧಿಕಾರಿ ಎಚ್. ಎಲ್. ನಾಗರಾಜು ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಚ್.ಎಲ್. ನಾಗರಾಜು ಈಗ ಮಂಡ್ಯ ಜಿಲ್ಲೆಗೆ ಆಗಮಿಸಿರುವುದು ಜನರ ಪಾಲಿಗೆ ಸಂತಸ ತಂದಿದೆ.
ಇದುವರೆಗೂ ಅಪರ ಜಿಲ್ಲಾಧಿಕಾರಿಯಾಗಿದ್ದ ಶೈಲಜಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು ಅವರಿಗೆ ಇನ್ನು ಜಾಗ ತೋರಿಸಿಲ್ಲ.
ದಕ್ಷ ಅಧಿಕಾರಿಯಂದೇ ಹೆಸರು ಮಾಡಿರುವ ಎಚ್.ಎಲ್. ನಾಗರಾಜ್ ಅವರು ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸಿ ಕಂದಾಯ ಇಲಾಖೆಯಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಜನಾನುರಾಗಿ ಎಂದು ಹೆಸರು ಗಳಿಸಿದ್ದರು.